ಬೆಂಗಳೂರು: ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿದೆ.
ಮನ್ಸೂರ್ ಖಾನ್ ಜುಲೈ19,2019ರಿಂದ ಜೈಲಿನಲ್ಲಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ.
ಫೆ. 12ರಂದು ಜಾಮೀನಿನ ಮೇಲೆ ಬಿಡುಗಡೆ ಆಗಬಹುದಾಗಿದೆ. ಫೆ.12ಕ್ಕೆ ಮೊದಲು ಸಿಬಿಐ ತಂಡವು ತನ್ನ ಎಲ್ಲಾ ತನಿಖೆಗಳನ್ನು ಪೂರೈಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.