ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಂದ್ರ ಸರ್ಕಾರದ ನಿರ್ಧಾರ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಕಿಡಿಕಾರಿರುವ ಜಯಮೃತ್ಯುಂಜಯ ಸ್ವಾಮೀಜಿ ಯಡಿಯೂರಪ್ಪನವರಿಗೆ ಬುದ್ಧಿ ಸ್ಥಿಮಿತದಲಿಲ್ಲ, ಅವರಿಗೆ ವಯಸ್ಸಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಯಡಿಯೂರಪ್ಪ, ನಿನ್ನೆ ಸರ್ಕಾರದ ನಿಯೋಗ ಕಳುಹಿಸಿ ಭರವಸೆ ನೀದಿದರು. ಇಂದು ವಿಧಾನಸಭೆಯಲ್ಲಿ ಮೀಸಲಾತಿ ಬಗ್ಗೆ ಕೇಂದ್ರದತ್ತ ಬೆರಳು ತೋರುತ್ತಿದ್ದಾರೆ. ಹೀಗಾಗಿ ಬಿಎಸ್ ವೈ ಅವರಿಗೆ ಬುದ್ಧಿ ಸ್ಥಿಮಿತದಲ್ಲಿಲ್ಲ, ವಯಸ್ಸಾಗಿದೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಬೇರೆ ಲಿಂಗಾಯಿತರನ್ನು ಕೂರಿಸಬೇಕು ಎಂದು ಹೇಳಿದರು.
Laxmi News 24×7