Breaking News

ಮುಂದಿನ ವರ್ಷದಿಂದ ರಾಜ್ಯದ ಎಲ್ಲ ಇಲಾಖೆಗಳಿಗೆ ಸಮವಸ್ತ್ರಗಳನ್ನು ಜವಳಿ ಇಲಾಖೆಯ ನಿಗಮ ಗಳಿಂದಲೇ ಪೂರೈಕೆ

Spread the love

ಬೆಂಗಳೂರು: ‘ಮುಂದಿನ ವರ್ಷದಿಂದ ರಾಜ್ಯದ ಎಲ್ಲ ಇಲಾಖೆಗಳಿಗೆ ಸಮವಸ್ತ್ರಗಳನ್ನು ಜವಳಿ ಇಲಾಖೆಯ ನಿಗಮ
ಗಳಿಂದಲೇ ಪೂರೈಕೆ ಮಾಡಲಾಗುವುದು. ಹೊರ ರಾಜ್ಯಗಳಿಂದ ಬಟ್ಟೆ ಆಮದು ಮಾಡುವುದನ್ನು ನಿಲ್ಲಿಸಿ ಸ್ಥಳೀಯ ನೇಕಾರರಿಗೆ ಆದ್ಯತೆ ನೀಡಲಾಗುವುದು’ ಎಂದು ಕೈಮಗ್ಗ ಹಾಗೂ ಜವಳಿ ಸಚಿವ ಶ್ರೀಮಂತ ಪಾಟೀಲ ಭರವಸೆ ನೀಡಿದರು.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ವರ್ಷದಿಂದ ಸಮವಸ್ತ್ರಕ್ಕೆ ರಾಜ್ಯದ ನೇಕಾರರ ಬಟ್ಟೆಯನ್ನೇ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಿದ್ದೇವೆ’ ಎಂದರು.

‘ಸಮವಸ್ತ್ರಕ್ಕೆ ಮೂರು ಕೋಟಿ ಮೀಟರ್‌ಗೂ ಹೆಚ್ಚು ಬಟ್ಟೆಯ ಅವಶ್ಯಕತೆ ಇದೆ. ಟೆಂಡರ್ ಕರೆದು ಹೊರರಾಜ್ಯದಿಂದ ತರಿಸುವ ಬದಲು ನಮ್ಮ ನೇಕಾರರಿಗೆ ಅವಕಾಶ ನೀಡಿದರೆ ಅವರಿಗೂ ಒಳ್ಳೆಯದಾಗಲಿದೆ. ಜವಳಿ ಇಲಾಖೆಯ ಮೂಲಕವೇ ಖರೀದಿಸುವ ವ್ಯವಸ್ಥೆ ಆಗಬೇಕು’ ಎಂದು ಭಾರತಿ ಶೆಟ್ಟಿ ಸಲಹೆ ನೀಡಿದರು.

‘ರಾಜ್ಯ ಸರ್ಕಾರದ ಇಲಾಖೆಗಳಿಗೆ ಜವಳಿ ಇಲಾಖೆಯಿಂದಲೇ ಸಮವಸ್ತ್ರ ಪೂರೈಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿದ್ದೇನೆ. ಅವರೂ ಸಹಮತ ವ್ಯಕ್ತಪಡಿಸಿದ್ದಾರೆ. ಹೊರ ರಾಜ್ಯದಿಂದ ಬಟ್ಟೆ ಖರೀದಿಸುವುದನ್ನು ಮುಂದಿನ ವರ್ಷದಿಂದ ನಿಲ್ಲಿಸಲು ನಿರ್ಧರಿಸಲಾಗಿದೆ’ ಎಂದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ