Breaking News

ಇಂದು ಕುರುಬ ಸಮುದಾಯದಿಂದ ಬೃಹತ್​ ಸಮಾವೇಶ

Spread the love

ಬೆಂಗಳೂರು (ಫೆ. 7): ಕುರುಬ ಸಮುದಾಯ ಬೃಹತ್​ ಸಮಾವೇಶಕ್ಕೆ ಇಂದು ರಾಜಧಾನಿ ಸಾಕ್ಷಿಯಾಗಲಿದೆ. ಈ ಮೂಲಕ ತಮ್ಮ ಮೀಸಲಾತಿಯ ಕೂಗನ್ನು ಸರ್ಕಾರಕ್ಕೆ ಮುಟ್ಟಿಸಲು ಸಮುದಾಯ ನಿರ್ಧರಿಸಿದೆ. ಈಗಾಗಲೇ ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿಗೆ  ಯಶಸ್ವಿ ಪಾದಯಾತ್ರೆಯನ್ನು ನಡೆಸಲಾಗಿದೆ.  ನಗರದ ಹೊರವಲದಲ್ಲಿರುವ ಮಾದಾವರ ಅಂತಾರಾಷ್ಟ್ರೀಯ ಪ್ರದರ್ಶನ ಮೈದಾನದಲ್ಲಿ ಇಂದು ಬೃಹತ್​ ಸಮಾವೇಶ ನಡೆಯಲಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ. ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಶಿಫಾರಸನ್ನು ಕೇಂದ್ರಕ್ಕೆ ಕಳುಹಿಸಬೇಕು. ಸಮುದಾಯದ ಎಲ್ಲರೂ ಈಗಾಗಲೇ ಈ ಕುರಿತು ಬೇಡಿಕೆಯನ್ನು ಇಟ್ಟಿದ್ದೇವೆ. ಸರ್ಕಾರ ನಮ್ಮ ಭರವಸೆಯನ್ನು ಈಡೇರುಸುತ್ತದೆ ಎಂಬ ನಿರೀಕ್ಷೆ ಇದೆ ಎಂದು ನಿರಂಜನಾನಂದ ಸ್ವಾಮೀಜಿಗಳು ತಿಳಿಸಿದ್ದಾರೆ.

Kuruba ST Reservation: ಎಸ್​ಟಿ ಮೀಸಲಾತಿ; ಇಂದು ಕುರುಬ ಸಮುದಾಯದಿಂದ ಬೃಹತ್​ ಸಮಾವೇಶ
“ಎಸ್‌ಟಿ ನಮ್ಮ ಹಕ್ಕು” ಹೆಸರಿನೆ ಕುರುಬ ಸಮುದಾಯದ ಬೃಹತ್ ಸಮಾವೇಶ ನಡೆಯಲಿದ್ದು, ಮನೆಗೊಬ್ಬ ರಾಯಣ್ಣ, ಸಮಾವೇಶಕ್ಕೆ ಬಾರಣ್ಣ ಎನ್ನುವ ಶ್ರೀಗಳ ಕರೆಯಂತೆ ಸುಮಾರು ಹತ್ತು ಲಕ್ಷ ಜನ ಕುರುಬ ಸಮುದಾಯದವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜನವರಿ 15 ರಂದು ಕಾಗಿನೆಲೆಯಿಂದ ಪಾದಯಾತ್ರೆ ಪ್ರಾರಂಭವಾಗಿ ಫೆಬ್ರವರಿ 4 ರಂದು ಬೆಂಗಳೂರಿನ ಅಣ್ಣಮ್ಮ ದೇವಾಲಯದಲ್ಲಿ ಪಾದಯಾತ್ರೆ ಸಮಾಪ್ತಿ ಮಾಡಲಾಯಿತು. ಇನ್ನೂ ನಾಳೆ ನಡೆಯುವ ಸಮಾವೇಶದಲ್ಲಿ ನಿರಂಜನಾನಂದ ಶ್ರೀಗಳು ನೇತೃತ್ವದಲ್ಲಿ ಸಚಿವ ಈಶ್ವರಪ್ಪ ಹಾಗೂ ಮಾಜಿ ಸಚಿವ ಹೆಚ್‌ಎಂ ರೇವಣ್ಣ ಸಾರಥ್ಯ ವಹಿಸಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸುವವರಿಗಾಗಿ 15 ಲಕ್ಷ ರೊಟ್ಟಿ, 60 ಸಾವಿರ ಲೀಟರ್ ಮೊಸರು ಸೇರಿದಂತೆ ವಿವಿದ ಖಾದ್ಯಗಳನ್ನ ತಯಾರಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ