Breaking News

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯನ ಮನೆಗೆ ಬೆಂಕಿ

Spread the love

ಕೋಲಾರ: ಗ್ರಾಮ ಪಂಚಾಯತಿ ಚುನಾವಣೆಯ ದ್ವೇಷದ ಹಿನ್ನೆಲೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯನ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮುಳಬಾಗಲು ತಾಲೂಕಿನ ರಾಜೆಂದ್ರಹಳ್ಳಿಯಲ್ಲಿ ನಡೆದಿದೆ.

ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿತ ನೂರ್ ಜಾನ್ ಮನೆಗೆ ವಿರೋಧಿ ಗುಂಪಿನಿಂದ ಬೆಂಕಿ ಹಾಕಿರುವ ಅರೋಪ ಕೇಳಿ ಬಂದಿದೆ. ಘಟನೆಯಲ್ಲಿ ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಹಾಗೂ ನಷ್ಟ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಡಿವೈಎಸ್​ಪಿ ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಇಟ್ಟಿರುವ ಕಿಡಿಗೇಡಿಗಳ ವಿರುದ್ಧ ನಂಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ