Breaking News

ಪ್ರಧಾನ ಮಂತ್ರಿ ಗಳಿಗೆ ರೈತರ ಬಗ್ಗೆ ಗೌರವ್ ಇದೆಯಾ …?H.D.K.

Spread the love

ರಾಮನಗರ  :  ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ‌.ಕುಮಾರಸ್ವಾಮಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಉದ್ಘಾಟನಾ ಸಮಾರಂಭದಲ್ಲಿಯೂ ಭಾಗವಹಿಸಿದ್ದರು‌. ಈ  ಸಂದರ್ಭದಲ್ಲಿ ಮಾತನಾಡಿದ ಹೆಚ್ಡಿಕೆ ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ, ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು‌.ಧಾರ್ಮಿಕ ಗುರುಗಳ ಭಾವನೆಗೂ ಸರ್ಕಾರ ಗೌರವ ಕೊಡಬೇಕು ಆ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮವಹಿಸಬೇಕಿದೆ ಎಂದರು.

ಇನ್ನು ಬಿಜೆಪಿ – ಜೆಡಿಎಸ್ ಮೈತ್ರಿ ವಿಚಾರಕ್ಕೆ ಮಾತನಾಡಿದ ಹೆಚ್ಡಿಕೆ, ಅದು ಸಭಾಪತಿ ಸ್ಥಾನಕ್ಕಾಗಿ ಮೈತ್ರಿಯಾಗಿದ್ದೇವೆ. ಅದನ್ನ ಬಿಟ್ಟು ಬೇರೆ ರೀತಿ ಹೊಂದಾಣಿಕೆ ಇಲ್ಲ. ನಾವು ವಿಷಯಾಧಾರಿತವಾಗಿ, ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿಯಾಗುತ್ತೇವೆ. ಜನವಿರೋಧಿ ನೀತಿಗಳ ವಿರುದ್ಧ ಎಂದಿಗೂ ರಾಜೀ ಇಲ್ಲ ಎಂದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ