Home / ರಾಜ್ಯ / ಒಂದು ಟ್ವೀಟ್ ಮತ್ತು ಟೂಲ್​ಕಿಟ್​ನಿಂದ ಹಲವು ಸಂಗತಿಗಳು ಬಯಲಾಗಲಿವೆ: ವಿದೇಶಾಂಗ ಸಚಿವ

ಒಂದು ಟ್ವೀಟ್ ಮತ್ತು ಟೂಲ್​ಕಿಟ್​ನಿಂದ ಹಲವು ಸಂಗತಿಗಳು ಬಯಲಾಗಲಿವೆ: ವಿದೇಶಾಂಗ ಸಚಿವ

Spread the love

ದೆಹಲಿ: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ಮಾಡಿದ್ದ ಟ್ವೀಟ್​ಗೆ, ಭಾರತೀಯ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು ಸರಿ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಮರ್ಥನೆ ಮಾಡಿಕೊಂಡಿದ್ದಾರೆ. ಸ್ವೀಡನ್​ನ ಯುವ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್ ಡಿಲೀಟ್ ಮಾಡಿರುವ ಟ್ವೀಟ್​ನಲ್ಲಿ ಟೂಲ್​ಕಿಟ್ ಡಾಕ್ಯುಮೆಂಟ್ ಹಂಚಿಕೊಂಡಿದ್ದಳು. ಅದಾದ ಬಳಿಕ ದೆಹಲಿ ಪೊಲೀಸರು, ಟೂಲ್​ಕಿಟ್​ಗೆ ಖಲಿಸ್ತಾನಿ ಸಂಬಂಧ ಇರುವುದನ್ನು ಪತ್ತೆಮಾಡಿದ್ದರು.

ಈ ಘಟನೆಗಳು ನಡೆದು ಎರಡು ದಿನಗಳ ಬಳಿಕ (ಫೆ.6) ಮಾತನಾಡಿರುವ ಎಸ್. ಜೈಶಂಕರ್, ಟೂಲ್​ಕಿಟ್ ಡಾಕ್ಯುಮೆಂಟ್ ಹಲವಾರು ಸಂಗತಿಗಳನ್ನು ಬಯಲು ಮಾಡಿದೆ. ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳ ಟ್ವೀಟ್ ವಿಚಾರಕ್ಕೆ ಭಾರತೀಯ ವಿದೇಶಾಂಗ ಸಚಿವಾಲಯ ಯಾಕೆ ಪ್ರತಿಕ್ರಿಯಿಸಿದೆ ಎಂದು ಇದರಿಂದ ಸರಿಯಾಗಿ ತಿಳಿಯಬಹುದು ಎಂದು ಹೇಳಿದ್ದಾರೆ.

ಒಂದು ಟ್ವೀಟ್, ಟೂಲ್​ಕಿಟ್ ಹಲವು ಸಂಗತಿಗಳನ್ನು ಬಯಲು ಮಾಡಿದೆ. ಇನ್ನೂ ಏನೇನು ವಿಚಾರಗಳು ಹೊರಬೀಳಲಿವೆ ಎಂಬ ಬಗ್ಗೆ ನಾವು ಕಾದುನೋಡಬೇಕು. ಸೆಲೆಬ್ರಿಟಿಗಳು ತಮಗೆ ಹೆಚ್ಚು ತಿಳಿದಿರದ ವಿಚಾರವಾಗಿ ಮಾತನಾಡಿದ್ದಾರೆ. ಅವರ ಟ್ವೀಟ್​ಗೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿರುವುದಕ್ಕೆ ಖಚಿತ ಕಾರಣವಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ಗುರುವಾರ (ಫೆ. 4) ದೆಹಲಿ ಪೊಲೀಸ್ ಸೈಬರ್ ಕ್ರೈಂ ವಿಭಾಗದವರು, ಟೂಲ್​ಕಿಟ್ ತಯಾರಿಸಿದವರ ವಿರುದ್ಧ ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷ ಹರಡಿರುವ ಬಗ್ಗೆ ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. 18 ವರ್ಷದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್​ಬರ್ಗ್, ರೈತರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದಳು. ಅದರಲ್ಲಿ ಟೂಲ್​ಕಿಟ್ ಕೂಡ ಶೇರ್ ಆಗಿತ್ತು. ಬಳಿಕ, ಆ ಟ್ವೀಟ್​ ಅನ್ನು ಗ್ರೆಟಾ ಡಿಲಿಟ್ ಮಾಡಿದ್ದಳು.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶೇಷ ಕ್ರೈಂ ಬ್ರಾಂಚ್​ನ ಪ್ರವೀರ್ ರಂಜನ್, ಟೂಲ್​ಕಿಟ್ ರಚನೆಯ ಹಿಂದೆ ಖಲಿಸ್ತಾನಿ ಪರವಾಗಿರುವ ‘ಪೊಯೆಟಿಕ್ ಜಸ್ಟೀಸ್ ಫೌಂಡೇಷನ್’ ಕೈವಾಡ ಇರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳು ರೈತರ ಪ್ರತಿಭಟನೆಯ ಪರವಾಗಿ ಟ್ವೀಟ್ ಮಾಡಿದ್ದರು. ಪಾಪ್ ತಾರೆ ರಿಹಾನ್ನಾ, ನ್ಯಾಯವಾದಿ-ಬರಹಗಾರ್ತಿ ಮೀನಾ ಹ್ಯಾರಿಸ್, ಗ್ರೆಟಾ ಥನ್​ಬರ್ಗ್ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಬಳಿಕ, ಭಾರತೀಯ ವಿದೇಶಾಂಗ ಸಚಿವಾಲಯ ಈ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿತ್ತು. ಅವರ ಟ್ವೀಟ್​ಗಳನ್ನು ಸ್ಪಷ್ಟವೂ ಅಲ್ಲದ, ಜವಾಬ್ದಾರಿಯುತವಲ್ಲದ ಹೇಳಿಕೆ ಎಂದು ತಿಳಿಸಿತ್ತು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ