Breaking News

ತಮಿಳು, ತೆಲುಗಿನಿಂದಾಗಿ ಕನ್ನಡ ಚಿತ್ರರಂಗ ಉದ್ದಾರ ಆಗಿಲ್ಲ: ಸುದೀಪ್ ಖಡಕ್ ಮಾತು

Spread the love

ಬೆಂಗಳೂರು: ಬೇರೆ ಭಾಷೆಯಿಂದಾಗಿ ನಮ್ಮ ಚಿತ್ರರಂಗ ಇತ್ತೀಚೆಗಿನ ದಿನಗಳಲ್ಲಿ ಬೇರೆ ಲೆವೆಲ್ ಗೆ ಹೋಗಿಲ್ಲ. ಕನ್ನಡಕ್ಕೆ ಕನ್ನಡದ್ದೇ ಆದ ನೆಲೆ, ಸ್ಥಾನ-ಮಾನವಿದೆ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ.

ಮ್ಮ ಚಿತ್ರಜೀವನಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಮಾಧ‍್ಯಮಗಳೊಂದಿಗೆ ಮಾತನಾಡಿದ ಸುದೀಪ್, ಕನ್ನಡ ಸಿನಿಮಾ ಈಗ ಬೇರೆ ಭಾಷೆಗಳಲ್ಲೂ ಮಿಂಚುತ್ತಿದೆ. ಇದರಿಂದಾಗಿ ನಮ್ಮ ಸಿನಿಮಾದ ಲೆವೆಲ್ ಬೇರೆಯಾಗಿದೆ ಎಂದು ನಿಮಗನಿಸುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ‘ತಮಿಳು, ತೆಲುಗು, ಭಾಷೆಗಳಿಂದಾಗಿ ನಮ್ಮ ಸಿನಿಮಾ ಬೇರೆ ಮಟ್ಟಕ್ಕೆ ಹೋಗಿದ್ದಲ್ಲ. ಕನ್ನಡ ಸಿನಿಮಾಗೆ ಅದರದ್ದೇ ಆದ ಸ್ಥಾನ ಮಾನವಿದೆ. ಅಂದು ಎಲ್ಲರೂ ಓಡುತ್ತಿದ್ದರು, ನಾವು ನಡೆಯುತ್ತಿದ್ದೆವು. ಈಗ ನಾವೂ ಓಡಲು ಆರಂಭಿಸಿದ್ದೇವೆ. ಇದಕ್ಕೆ ಹಲವರು ಕಾರಣ. ಆ ಯಶಸ್ಸಿನಲ್ಲಿ ನಾವೂ ಭಾಗಿಯಾಗೋಣ’ ಎಂದಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ