Breaking News
Home / ರಾಜಕೀಯ / ಕೊನೆಗೂ ಬಳ್ಳಾರಿಯನ್ನು ವಿಭಜಿಸಿ ಹೊಸ ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಸರ್ಕಾರ; ಹೊಸಪೇಟೆ ಕಾರ್ಯಸ್ಥಾನ!

ಕೊನೆಗೂ ಬಳ್ಳಾರಿಯನ್ನು ವಿಭಜಿಸಿ ಹೊಸ ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಸರ್ಕಾರ; ಹೊಸಪೇಟೆ ಕಾರ್ಯಸ್ಥಾನ!

Spread the love

ಬೆಂಗಳೂರು (ಫೆಬ್ರವರಿ 08); ಸಚಿವ ಆನಂದ್​ ಸಿಂಗ್ ಅವರ ಮನವಿಗೆ ಕೊನೆಗೂ ಮನ್ನಣೆ ನೀಡಿರುವ ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ಒಡೆದು ಹೊಸ ವಿಜಯನಗರ ಜಿಲ್ಲೆಯನ್ನು ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಘೋಷಿಸಿದೆ. ಆ ಕುರಿತು ಅಧಿಕೃತ ಆದೇಶವನ್ನೂ ಸಹ ರಾಜ್ಯ ಸರ್ಕಾರ ಹೊರಡಿಸಿದೆ. ಹೊಸಪೇಟೆಯನ್ನು ಕಾರ್ಯಸ್ಥಾನವನ್ನಾಗಿಸಿ ವಿಜಯನಗರ ಎಂಬ ಹೊಸ ಜಿಲ್ಲೆಯನ್ನು ಘೋಷಿಸಬೇಕು ಎಂಬ ಕೂಗು ಬಹುದಿನಗಳಿಂದಲೂ ಇದೆ. ಕೊಪ್ಪಳವನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಿದ ಸಂದರ್ಭದಲ್ಲೇ ಈ ಕೂಗು ಜೋರಾಗಿ ಕೇಳಿ ಬಂದಿತ್ತು. ಹೋರಾಟಗಳೂ ಸಹ ನಡೆದಿದ್ದವು. ಆದರೆ, ಸರ್ಕಾರ ಈ ಕುರಿತು ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಸಚಿವ ಆನಂದ್​ ಸಿಂಗ್ ಇದೇ ಕಾರಣಕ್ಕೆ ಕಾಂಗ್ರೆಸ್​ ಪಕ್ಷದಿಂದ ಹೊರಬಂದು ಬಿಜೆಪಿ ಸೇರ್ಪಡೆಯಾಗಿದ್ದರು.

ಸಚಿವ ಆನಂದ್ ಸಿಂಗ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವಾಗಲೇ ಬಳ್ಳಾರಿಯನ್ನು ಒಡೆದು ವಿಜಯನಗರವನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟೆ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಹೀಗಾಗಿ ಆನಂದ್​ ಸಿಂಗ್​ ಗೆ ಕೊಟ್ಟ ಮಾತಿನ ಮೇರೆಗೆ ಸಿಎಂ ಯಡಿಯೂರಪ್ಪ ಕೊನೆಗೂ ವಿಜಯನಗರ ಜಿಲ್ಲೆಯನ್ನು ಇಂದು ಘೋಷಣೆ ಮಾಡಿದ್ದಾರೆ.

ರಾಜ್ಯದ 31ನೇ ಜಿಲ್ಲೆ ವಿಜಯನಗರಕ್ಕೆ ರಾಜ್ಯ ಸಚಿವ ಸಂಪುಟ ಕಳೆದ ವಾರ ಅಸ್ತು ಎಂದಿತ್ತು. ಹೀಗಾಗಿ ಮುಖ್ಯಮಂತ್ರಿ ಇಂದು ತಮ್ಮ ಸಂಪುಟದ ಈ ನಿರ್ಧಾರವನ್ನು ಕಾನೂನಾತ್ಮಕವಾಗಿ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಿ ಎಲ್ಲರ ಅನುಮತಿಯೊಂದಿಗೆ ಇದೀಗ ಹೊಸ ಜಿಲ್ಲೆಯನ್ನು ಘೋಷಿಸಿದೆ. ಈ ಮೂಲಕ ಸಚಿವ ಆನಂದ್​ ಸಿಂಗ್ ಅವರ ಬಹುದಿನಗಳ ಕನಸು ನನಸಾದಂತಾಗಿದೆ.

 


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ