Breaking News

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

Spread the love

ಗದಗ: ಹಾವನ್ನ ಕಂಡ್ರೆ ಸಾಕು ಮಾರುದ್ದ ಓಡುವ ಜನರ ಸಂಖ್ಯೆಯೇ ಹೆಚ್ಚು. ‘ಹಾವು’ ಅಂದ್ರೆ ನಿದ್ರೆಯಲ್ಲೂ ಹಲವರು ಬೆಚ್ಚಿಬೀಳ್ತಾರೆ. ಆದರೆ, ಇಲ್ಲೊಬ್ಬ ವೃದ್ಧ ಹಾವಿನ ಜೊತೆ ಚೆಲ್ಲಾಟವಾಡುತ್ತ ಆ ಹಾವಿನಿಂದಲೇ ಪ್ರಾಣಬಿಟ್ಟಿದ್ದಾನೆ.

ಇಂತಹ ಘಟನೆ ರೋಣ ಪಟ್ಟಣದಲ್ಲಿ ಸೋಮವಾರ ಸಂಭವಿಸಿದೆ. ಮಕ್ತುಮ್ ಸಾಬ ರಾಜೆಖಾನ್ (75) ಮೃತ ದುರ್ದೈವಿ. ಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು

ಹಲವು ವರ್ಷಗಳಿಂದ ಹಾವು ಹಿಡಿಯುವದರಲ್ಲಿ ಈ ವೃದ್ಧ ನಿಪುಣನಾಗಿದ್ದ. ಇಂದು ತಹಸೀಲ್ದಾರ್​ ಕಚೇರಿ ಆವರಣದಲ್ಲಿ ಹಾವು ಕಾಣಿಸಿಕೊಂಡಿತ್ತು. ಅದನ್ನು ಹಿಡದವ ಸುಮ್ಮನೆ ಕಾಡಿಗೆ ಬಿಡುವ ಬದಲು ಹಾವಿನ್ನ ಕೈಯಲ್ಲಿ ಹಿಡಿದುಕೊಂಡು ಆಟವಾಡಿದ್ದ. ಈ ವೇಳೆ ವೃದ್ಧನಿಗೆ ಹಾವು ಕಚ್ಚಿತು. ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ವೃದ್ಧ ಬದುಕುಳಿಯಲಿಲ್ಲ. ರೋಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ