ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಬಿಬಿಎಂಪಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪನನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.
ಪೂರ್ಣಗೊಂಡ ಕಟ್ಟಡಕ್ಕೆ ಅಕ್ಯುಪೆನ್ಸ್ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ವೇಳೆ ದೇವೇಂದ್ರಪ್ಪ ಸಿಕ್ಕಿಬಿದ್ದಿದ್ದರು.
ಹುಳಿಮಾವು ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿಯವರಿಗೆ ಸೇರಿದ ಸ್ವತ್ತಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಸಿಗ್ಮಿಸ್ ಬ್ರಿವರೀಸ್ ಘಟಕದ ಕಟ್ಟಡ ನಿರ್ಮಾಣ ರ್ಪೂಗೊಳಿಸಲಾಗಿತ್ತು. ಆದರೆ ಪೂರ್ಣಗೊಂಡ ಕಟ್ಟಡ ಕಾಮಗಾರಿಗೆ ಓ.ಸಿ. ಪಡೆಯಲು ಕಂಪನಿ ಮ್ಯಾನೇಜರ್ ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಎಡಿಟಿಪಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.