Breaking News

ರಾಜ್ಯ ಸರ್ಕಾರದಿಂದಲೂ ತೆರಿಗೆ ಬರೆ..! ಬಿಎಸ್‌ವೈ ಬಜೆಟ್‌ನಲ್ಲಿ ಕಾದಿದೆ ಶಾಕ್..?

Spread the love

ಬೆಂಗಳೂರು,ಫೆ.10- ಈ ಬಾರಿ ಕೋವಿಡ್-19 ಬಂದ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷಿತ ಪ್ರಮಾಣದ ತೆರಿಗೆ ಸಂಗ್ರಹವಾಗದಿರುವ ಕಾರಣ ಈ ಬಾರಿಯ ಬಜೆಟ್‍ನಲ್ಲಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ.

ಕಳೆದ ವರ್ಷ ಸರ್ಕಾರ ಇಟ್ಟುಕೊಂಡಿದ್ದ ತೆರಿಗೆ ಸಂಗ್ರಹಣೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಮುಖ್ಯವಾಗಿ ಮದ್ಯ, ಸಿಗರೇಟು, ಕಬ್ಬಿಣ, ಸಿಮೆಂಟ್, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸೇರಿದಂತೆ ಬೊಕ್ಕಸಕ್ಕೆ ಆದಾಯ ತರುವ ವಸ್ತುಗಳ ಮೇಲೆ ತೆರಿಗೆ ಹೆಚ್ಚಳ ಮಾಡಬೇಕೆಂಬ ಪ್ರಸ್ತಾಪ ವ್ಯಕ್ತವಾಗಿದೆ.

ಖುದ್ದು ಹಣಕಾಸು ಇಲಾಖೆ ಅಕಾರಿಗಳೇ ತೆರಿಗೆ ಹೆಚ್ಚಳ ಮಾಡದಿದ್ದರೆ ಈ ವರ್ಷ ಆರ್ಥಿಕ ನಿರ್ವಹಣೆ ಕಷ್ಟಕರವಾಗಲಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ವಾಣಿಜ್ಯ ವಿಭಾಗದಿಂದ 7,459.29 ಕೋಟಿ, ಅಬಕಾರಿ ಇಲಾಖೆಯಿಂದ 2436.34 ಕೋಟಿ, ನೋಂದಣಿ ಮತ್ತು ಮುದ್ರಾಂಕದಿಂದ 1150 ಕೋಟಿ ಹಾಗೂ ಸಾರಿಗೆ ಇಲಾಖೆಯಿಂದ 533 ಕೋಟಿ ರೂ. ಸಂಗ್ರಹವಾಗಿತ್ತು.

Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ