Breaking News
Home / ರಾಜ್ಯ / ಪಡಿತರದಲ್ಲಿ ರಾಗಿ ಮತ್ತು ಜೋಳ ನೀಡುವಂತೆ ಕೇಂದ್ರ ಸಚಿವರಲ್ಲಿ ಕತ್ತಿ ಮನವಿ

ಪಡಿತರದಲ್ಲಿ ರಾಗಿ ಮತ್ತು ಜೋಳ ನೀಡುವಂತೆ ಕೇಂದ್ರ ಸಚಿವರಲ್ಲಿ ಕತ್ತಿ ಮನವಿ

Spread the love

ಬೆಂಗಳೂರು, ಫೆ.12- ಕಡಿತ ಮಾಡಲಾದ ಪಡಿತರಕ್ಕೆ ಪರ್ಯಾಯವಾಗಿ ರಾಗಿ ಮತ್ತು ಜೋಳವನ್ನು ವಿತರಿಸುವಂತೆ ಸಚಿವ ಉಮೇಶ್ ಕತ್ತಿ ಕೇಂದ್ರ ಆಹಾರ ಸಚಿವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರನ್ನು ಭೇಟಿ ಮಾಡಿದ ಅವರು ಭೇಟಿ ಮಾಡಿ ಚರ್ಚಿಸಿದ ಅವರು ಪ್ರಸ್ತುತ ಪಡಿತರ ಸರಬರಾಜು ವ್ಯವಸ್ಥೆಯಲ್ಲಿ ಅಕ್ಕಿ, ಗೋ ವಿತರಣೆ ಕಡಿತಗೊಳಿಸಿದ ಪ್ರಮಾಣಕ್ಕೆ ಪರ್ಯಾಯವಾಗಿ ರಾಗಿ, ಜೋಳ, ಸ್ಥಳೀಯ ಧಾನ್ಯಗಳನ್ನು ವಿತರಿಸಲು ಅವಕಾಶ ಮಾಡಿಕೊಡಬೇಕೆಂದು ಕೋರಿ ಪತ್ರ ಸಲ್ಲಿಸಿದರು.

ಭೌಗೋಳಿಕವಾಗಿ ಸ್ಥಳೀಯ ಜನರ ಆಹಾರ ಪದ್ಧತಿಗೆ ಅನುಸಾರವಾಗಿ ಪಡಿತರ ವಿತರಣೆ ಮಾಡಬೇಕಾಗುತ್ತದೆ. ಪ್ರಸ್ತುತ ಅಕ್ಕಿ, ಗೋಯನ್ನು ಮಾತ್ರ ಸರಬರಾಜು ಮಾಡಲಾಗುತ್ತಿದೆ. ಭೌಗೋಳಿಕ ಆಹಾರ ಪದ್ಧತಿಗೆ ವಿರುದ್ಧವಾಗಿ ಒಂದೇ ವಿಧದ ಆಹಾರ ಸೇವನೆಯಿಂದ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ