ಬೆಂಗಳೂರು, ಫೆ.12- ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿರುವುದು ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಒಂದೆಡೆ ಕುರುಬರು ಎಸ್ಟಿಗೆ ಸೇರಿಸಲು ಶಕ್ತಿ ಪ್ರದರ್ಶನ ತೋರುತ್ತಿದ್ದರೆ, ಇತ್ತ ಪಂಚಮಸಾಲಿ ಲಿಂಗಾಯತರು 2ಎ ಮೀಸಲಾತಿಗೆ ಪಟ್ಟು ಹಿಡಿದಿದ್ದಾರೆ. ಇನ್ನು ವಾಲ್ಮಿಕಿ ಸಮುದಾಯದವರು ಮೀಸಲಾತಿ ಹೆಚ್ಚಿಸುವಂತೆ ಪಟ್ಟು ಹಿಡಿದಿದ್ದಾರೆ.ಎಸ್ಟಿ ಮೀಸಲಾತಿ ಶೇ.7.5ರಷ್ಟು ಹೆಚ್ಚಿಸುವ ಸಂಬಂಧ ಸರ್ಕಾರದ ಮೇಲೆ ನಾನಾ ಸಮುದಾಯಗಳು ಒತ್ತಡ ಹೇರುತ್ತಿವೆ. ಪ್ರಸ್ತುತ ಕನಿಷ್ಠ 8 ಸಮುದಾಯಗಳು ಮೀಸಲಾತಿ ವಿಭಾಗದಲ್ಲಿ ಬದಲಾವಣೆ ಮಾಡುವಂತೆ ಮತ್ತು ಈಗಿರುವ ಮೀಸಲಾತಿಯಲ್ಲಿ ಇನ್ನಷ್ಟು ಸೌಲಭ್ಯ ನೀಡುವಂತೆ ಒತ್ತಾಯಿಸುತ್ತಿವೆ. ಅವರ ಬೇಡಿಕೆಗಳನ್ನು ಈಡೇರಿಸಿದರೆ ಮತ್ತಷ್ಟು ಸಮುದಾಯಗಳು ಮೀಸಲಾತಿಗೆ ಆಗ್ರಹಿಸಬಹುದು, ಇನ್ನಷ್ಟು ಸಮಸ್ಯೆ ರಾಜ್ಯ ಸರ್ಕಾರಕ್ಕೆ ಉಂಟಾಗಬಹುದು ಎಂಬ ಆತಂಕ ಎಸುಮಾರು 101 ಜಾ ಎಸ್ಸಿ, 50 ಜಾತಿ ಎಸ್ಟಿಯಲ್ಲಿವೆ. ಈಗಿರುವ ಮೀಸಲಾತಿ ಇತಿಮಿತಿಯೊಳಗೆ ಸರ್ಕಾರ ಮೀಸಲಾತಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.
ಈಗಿರುವ ಮೀಸಲಾತಿಗೆ ಹೊಂದಾಣಿಕೆ ಮಾಡಿ ಇತಿಮಿತಿಯೊಳಗೆ ಮೀಸಲಾತಿ ಕಲ್ಪಿಸುವ ಅನಿವಾರ್ಯತೆ ಸಿಎಂ ಅವರದ್ದು. ಹೀಗಾಗಿ ಮೀಸಲಾತಿ ವಿಚಾರ ಸಿಎಂಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದೆ.ದುರಾಗಿದೆ.
Laxmi News 24×7