Breaking News
Home / ರಾಜಕೀಯ / ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆ

ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆ

Spread the love

ಮೈಸೂರು: ಬಹುನಿರೀಕ್ಷಿತ, ಬಹು ಅಗತ್ಯವಿದ್ದ ಮೈಸೂರು-ಚಾಮರಾಜನಗರ ರೈಲು ಮಾರ್ಗ ಎಲೆಕ್ಟ್ರಿಫಿಕೇಷನ್ ಕಾಮಗಾರಿಗೆ ಶೀಘ್ರವೇ ಚಾಲನೆ ದೊರೆಯಲಿದೆ.

ಕಾಮಗಾರಿಗೆ ಗುತ್ತಿಗೆಯನ್ನು ನೀಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ವಿದ್ಯುದೀಕರಣಕ್ಕಾಗಿ ಇರುವ ಕೇಂದ್ರ ಕಚೇರಿಯ ಮುಖ್ಯ ಯೋಜನಾ ನಿರ್ದೇಶಕ ಆರ್ ಎ ಚೌಧರಿ ವಿದ್ಯುದೀಕರಣ ಕಾಮಗಾರಿ 12 ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ, ಫೆ.1 ರಂದು ಮಂಡನೆಯಾದ ಬಜೆಟ್ ನಲ್ಲಿ ಇದಕ್ಕಾಗಿ ಅನುದಾನವನ್ನೂ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಗೆ 18.89 ಕೋಟಿ ರೂಪಾಯಿಗಳ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸುಮಾರು 71 ಕಿ.ಮೀ ಉದ್ದದ ವಿದ್ಯುದೀಕರಣ ಯೋಜನೆ ಇದಾಗಿದ್ದು, ಈ ಮಾರ್ಗದಲ್ಲಿ ಕಚೇರಿಗೆ ತೆರಳುವವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವುದರಿಂದ ರೈಲುಗಳ ಸಂಚಾರ ವೇಗವಾಗಿರುವುದಕ್ಕೆ ಹಾಗೂ MEMU ಸೇವೆಗಳನ್ನು ಒದಗಿಸುವುದಕ್ಕೆ ಸಹಕಾರಿಯಾಗಲಿದೆ.

ಕಡಕೊಳದ ಬಳಿ ಸ್ಥಾಪನೆಯಾಗುತ್ತಿರುವ ಇನ್ಲ್ಯಾಂಡ್ ಕಂಟೇನರ್ ಟರ್ಮಿನಲ್ ಜೊತೆಗೆ CONCOR ಮಲ್ಟಿ ಮೋಡಲ್ ಲಾಜಿಸ್ಟಿಕ್ಸ್ ಪಾರ್ಕ್​ ನ ದೃಷ್ಟಿಯಿಂದಲೂ ಈ ವಿದ್ಯುದೀಕರಣ ಯೋಜನೆ ಮಹತ್ವ ಪಡೆದುಕೊಂಡಿದೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ