ಅಭಿವೃದ್ಧಿಯಲ್ಲಿ ಉತ್ತರಕರ್ನಾಟಕಕ್ಕೆ ಅನ್ಯಾಯವಾದ್ರೆ ಪ್ರತಿಭಟನೆ ಮಾಡಿಯೇ ಮಾಡುತ್ತೇನೆ. ನಾನು ಮಂತ್ರಿ ಆಗಿರಲಿ ಅಥವಾ ಆಗದೇ ಇರಲಿ ಎಂದು ಆಹಾರ ಸಚಿವ ಉಮೇಶ ಕತ್ತಿ ಮತ್ತೆ ಉತ್ತರಕರ್ನಾಟಕದ ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಮೇಶ ಕತ್ತಿ ಉತ್ತರಕರ್ನಾಟಕದಲ್ಲಿ ಏನು ಆಗಬೇಕೋ ಅದು ಆಗಲೇಬೇಕು. ಉತ್ತರಕರ್ನಾಟಕದಲ್ಲಿ ಆಗಬೇಕಿದ್ದ ಕೆಲಸ ಆಗದಿದ್ದಾಗ ನಾನು ಮಂತ್ರಿ ಇರಲಿ, ಬಿಡಲಿ ಪ್ರತಿಭಟನೆ ಮಾಡಿಯೇ ಮಾಡುತ್ತೇನೆ ಎಂದರು. ಇನ್ನು ಬಜೆಟ್ ಅಧಿವೇಶನ ಬೆಂಗಳೂರಿನಲ್ಲಿ ಆಗುತ್ತದೆ.
ಜೂನ್ನಲ್ಲಿ ನಡೆಯುವ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿಯೇ ನಡೆಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.
Laxmi News 24×7