ಬೆಂಗಳೂರು, ಏ. 28- ಅಂತ್ಯೋದಯ ಅನ್ನ ಪಡಿತರ ಚೀಟಿ (ಎಎವೈ) ಹೊಂದಿರುವ ಕುಟುಂಬದ ಒಬ್ಬ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿ ಹಾಗೂ ಆಯಾ ಕುಟುಂಬದ ಒಟ್ಟು ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಒಂದು ಕೆಜಿ ತೊಗರಿಬೇಳೆಯನ್ನು ಏಪ್ರಿಲ್ ಮತ್ತು ಮೇ ಎರಡು ತಿಂಗಳಲ್ಲಿ ಉಚಿತವಾಗಿ ವಿತರಿಸಲಾಗುವುದು.
ಪಿಹೆಚ್ಹೆಚ್ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಕುಟುಂಬದ ಒಬ್ಬ ಸದಸ್ಯರಿಗೆ 5 ಕೆಜಿ ಯಂತೆ ಅಕ್ಕಿ ಹಾಗೂ ಆಯಾ ಕುಟುಂಬದ ಒಟ್ಟು ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಒಂದು ಕೆಜಿ ತೊಗರಿಬೇಳೆಯನ್ನು ಏಪ್ರಿಲï ಮತ್ತು ಮೇ ಎರಡು ತಿಂಗಳು ಉಚಿತವಾಗಿ ವಿತರಿಸಲಾಗುವುದು.
ಎನ್ಪಿಹೆಚ್ಹೆಚ್ (ಎಪಿಎಲï) ಪಡಿತರ ಚೀಟಿ ಹೊಂದಿರುವ ಪ್ರತಿ ಪಡಿತರ ಚೀಟಿಗೆ 10 ಕೆಜಿ ಅಕ್ಕಿ ಮಾತ್ರ (ಒಪ್ಪಿಗೆ ಸೂಚಿಸಿಲ್ಲದ ಪಡಿತರ ಚೀಟಿಗೆ ಮಾತ್ರ), ಏಪ್ರಿಲ್ ಮತ್ತು ಮೇ ಎರಡು ತಿಂಗಳಿಗೆ ಪ್ರತಿ ಕೆಜಿಗೆ 15 ರೂ. ನಂತೆ ವಿತರಿಸಲಾಗುವುದು.
ಮುಕ್ತ ಮಾರುಕಟ್ಟೆಯ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಕಡ್ಡಾಯ ಮಾಡುವಂತಿಲ್ಲ. ಬಿ.ಪಿ.ಎಲ್ ಮತ್ತು ಎ.ಎ.ವೈ ಕಾರ್ಡುದಾರರಿಗೆ ಅಕ್ಕಿ ಮತ್ತು ತೊಗರಿಬೇಳೆಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಯಾವುದೇ ಹಣ ಪಾವತಿಸಬೇಕಾಗಿರುವುದಿಲ್ಲ.
ಲಾಕ್ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಹಾರ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮಾಹೆಯಲ್ಲಿ ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿರುತ್ತದೆ.
ಈ ರೀತಿ ಬಿಡುಗಡೆ ಮಾಡಿರುವ ಆಹಾರ ಧಾನ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆ ಹಾಗೂ ನಿರ್ದೇಶನದನ್ವಯ ಮೇ ಮಾಹೆಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲು ಹೆಚ್ಚುವರಿ ಹಂಚಿಕೆ ನೀಡಿರುತ್ತಾರೆ. ಪಡಿತರ ಚೀಟಿದಾರರು ಒಟಿಪಿ ಅಥವಾ ಬಯೋ ಮೂಲಕ ಪಡಿತರವನ್ನು ಪಡೆಯಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಉಪನಿರ್ದೇಶಕರು ಮೊ.ಸಂ.: 9482214068 ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.