Breaking News

ಪ್ರೇಮಿಗಳ ದಿನವೇ ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ಡಿಕೆಶಿ ಪುತ್ರಿ ಅದ್ಧೂರಿ ಮದುವೆ, ಗಣ್ಯರು ಭಾಗಿ

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿ. ಉದ್ಯಮಿ ಸಿದ್ದಾರ್ಥ್ ಹೆಗಡೆ ಪುತ್ರ ಅಮಾರ್ಥ್ಯ ಹೆಗಡೆ ಅವರ ವಿವಾಹ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮೊಮ್ಮಗ ಅಮಾರ್ಥ್ಯ ಹೆಗಡೆ ಮತ್ತು ಐಶ್ವರ್ಯಾ ಅವರ ಮದುವೆ ಪ್ರೇಮಿಗಳ ದಿನದಂದೇ ನೆರವೇರಲಿದೆ. ಡಿಕೆಶಿ ನಿವಾಸದಲ್ಲಿ ಮೆಹಂದಿ, ಸಂಗೀತ ಕಾರ್ಯಕ್ರಮ ನೆರವೇರಿದ್ದು ಸಂಭ್ರಮ ಸಡಗರ ಮನೆಮಾಡಿದೆ. ಇಂದು ಬೆಳಗ್ಗೆ 9.45 ಮುಹೂರ್ತದಲ್ಲಿ ಮದುವೆ ನೆರವೇರಲಿದ್ದು, ಸಿಎಂ ಯಡಿಯೂರಪ್ಪ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಫೆಬ್ರವರಿ 17 ರಂದು ಬೆಂಗಳೂರಿನಲ್ಲಿ ಅದ್ಧೂರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ