Breaking News

ರೈತರು, ಮನೆ ನಿರ್ಮಿಸುವವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

Spread the love

ಶಿವಮೊಗ್ಗ: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಶಿಕಾರಿಪುರದಲ್ಲಿ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು. ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ ಎಂದು ಹೇಳಿದ್ದಾರೆ.

ಹನಿ ನೀರಾವರಿ ಸೌಲಭ್ಯಕ್ಕಾಗಿ ಬಾಕಿ ಇರುವ ಅರ್ಜಿಗಳ ಮಾಹಿತಿ ಒದಗಿಸಿ. ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹನಿ ನೀರಾವರಿ ಅಳವಡಿಸಿರುವ ರೈತರಿಗೆ ಸಬ್ಸಿಡಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಿಯಮಾನುಸಾರ ಮರಳು ಮತ್ತು ಜಲ್ಲಿ ಸಾಗಾಟಕ್ಕೆ ಅಡ್ಡಿ ಉಂಟು ಮಾಡಬಾರದು. ಯಾವುದೇ ಕಾರಣಕ್ಕೂ ಮರಳು ಮತ್ತು ಜಲ್ಲಿ ಪೂರೈಕೆಗೆ ತೊಂದರೆಯಾಗಬಾರದು. ಕಾನೂನು ಬಾಹಿರವಾಗಿ ನಡೆಯುತ್ತಿರುವ ಚಟುವಟಿಕೆಗಳನ್ನು ಮಾತ್ರ ತಡೆಯಿರಿ ಎಂದು ಸೂಚಿಸಿದ್ದು, ಪರವಾನಿಗೆ ಪಡೆದು ನಡೆಯುತ್ತಿರುವ ಕಲ್ಲುಗಣಿ, ಕ್ರಷರ್ ಕಾರ್ಯ ನಿಲ್ಲಬಾರದು. ಅನುಮತಿಗಾಗಿ ಬಾಕಿ ಇರುವ ನಿರಪೇಕ್ಷಣಾ ಪತ್ರಗಳನ್ನು ತಕ್ಷಣ ನೀಡಬೇಕು ಎಂದು ತಿಳಿಸಿದ್ದಾರೆ.

ಶಿಕಾರಿಪುರ ತಾಲೂಕಿನಲ್ಲಿ ಎರಡು ಪಶು ವೈದ್ಯ ಆಸ್ಪತ್ರೆ ಆರಂಭಿಸಲು ಅನುಮೋದನೆ ನೀಡಲಾಗುವುದು. ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ಆದ್ದರಿಂದ ಕೆರೆ ಹೂಳು ತೆಗೆಯುವ ಕಾಮಗಾರಿಗಳನ್ನು ಸದ್ಯಕ್ಕೆ ಕೈಗೆತ್ತಿಕೊಳ್ಳಬಾರದು. ಹೂಳೆತ್ತುವ ಕಾಮಗಾರಿಗಳಿಗೆ ಈಗಾಗಲೇ ಟೆಂಡರ್ ಆಗಿದ್ದರೂ, ನೀರು ಖಾಲಿಯಾದರೆ ಮಾತ್ರ ಕಾಮಗಾರಿ ಆರಂಭಿಸಿ. ಅನುದಾನ ದುರುಪಯೋಗಕ್ಕೆ ಯಾವುದೇ ಇಲಾಖೆಗಳು ಆಸ್ಪದ ನೀಡಬಾರದು ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಎಲ್ಲಾ ಹಳ್ಳಿಗಳಲ್ಲೂ ಸ್ಮಶಾನ ಜಾಗ ಗುರುತಿಸಬೇಕು. ಜಲಜೀವನ್ ಮಿಷನ್ ಅಡಿ ಮನೆ ಮನೆಗೆ ನೀರು ಪೂರೈಕೆ ಮಾಡುವ ಯೋಜನೆಯನ್ನು ತ್ವರಿತವಾಗಿ ಅನುಷ್ಟಾನಗೊಳಿಸಬೇಕು. ಯೋಜನೆಯಡಿ ಪ್ರತಿ ಫಲಾನುಭವಿ ಮನೆಯವರು ನೀಡಬೇಕಾಗಿರುವ ಶೇ.10 ರಷ್ಟು ಹಣವನ್ನು ಸರ್ಕಾರದಿದ ನೇರವಾಗಿ ಪಾವತಿಸುವ ಕುರಿತು ಈ ಬಾರಿಯ ಬಜೆಟ್ ನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಲೋಕಸಬಾ ಸದಸ್ಯ ಬಿ.ವೈ. ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ತಾ.ಪಂ ಅಧ್ಯಕ್ಷ ಸುರೇಶ್ ನಾಯ್ಕ್, ಜಿಲ್ಲಾಧಿಕಾರಿ ಶಿವಕುಮಾರ್, ಸಿಇಒ ವೈಶಾಲಿ, ಎಸ್ಪಿ ಶಾಂತರಾಜು ಉಪಸ್ಥಿತರಿದ್ದರು.


Spread the love

About Laxminews 24x7

Check Also

ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Spread the love ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ