Breaking News
Home / Uncategorized / ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ಕದ್ದು ಕದ್ದು ನೋಡ್ತಿದ್ದ ಕಾಮುಕನಿಗೆ ಧರ್ಮದೇಟು

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ಕದ್ದು ಕದ್ದು ನೋಡ್ತಿದ್ದ ಕಾಮುಕನಿಗೆ ಧರ್ಮದೇಟು

Spread the love

ವಿಜಯಪುರ: ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಮೇಲೆ ಕಾಮುಕ ಕಣ್ಣು ಹಾಕಿದ್ದಕ್ಕೆ ಹಿಗ್ಗಾಮುಗ್ಗಾ ಧರ್ಮದೇಟು ತಿಂದ ಘಟನೆ ವಿಜಯಪುರದಲ್ಲಿ ನಡೆದಿದೆ.

ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಶಿನಾಥ ಧರ್ಮದೇಟು ತಿಂದ ಕಾಮುಕ. ಈತ ಗಿಡದ ಮೇಲೆ ಕುಳಿತು ಕದ್ದು ಕದ್ದು ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನುಎಂದಿನಿಂತೆ ಭಾನುವಾರ ಕೂಡ ಕಾಮುಕ ಕಾಶಿನಾಥ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನು. ಆದರೆ ಈ ವೇಳೆ ಸಾರ್ವಜನಿಕರ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾನೆ. ಆಗ ಕಾಶಿನಾಥನನ್ನು ರಸ್ತೆಯಲ್ಲಿ ಎಳೆದಾಡಿ, ಬಟ್ಟೆ ಬಿಚ್ಚಿ ಚಪ್ಪಲಿ ಸೇವೆ ಮಾಡಿದ್ದಾರೆ. ಜೊತೆಗೆ ಜನರು ಬಡಿಗೆಯಿಂದ ಹಿಗ್ಗಾಮುಗ್ಗಾ ಧರ್ಮದೇಟು ನೀಡಿದ್ದಾರೆ. ನಂತರ ತಾಳಿಕೊಟಿ ಪೊಲೀಸರಿಗೆ ಕಾಶಿನಾಥನನ್ನ ಸಾರ್ವಜನಿಕರು ಒಪ್ಪಿಸಿದ್ದಾರೆ.

ಇದಕ್ಕೂ ಮುಂಚೆ ಕೂಡ ಕಾಶಿನಾಥ ಅನೇಕ ಕಾಮಚೇಷ್ಟೆ ಮಾಡಿ ಗ್ರಾಮದಲ್ಲಿ ಧರ್ಮದೇಟು ತಿಂದಿದ್ದಾನೆ. ಆದರೆ ಥಳಿಸಿದ ಸಾರ್ವಜನಿಕರ ಮೇಲೆ ಕಾಶಿನಾಥ ದೂರು ದಾಖಲಿಸಿದ್ದನಂತೆ. ಹೀಗಾಗಿ ಗ್ರಾಮಕ್ಕೆ ಎಸ್‍ಪಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಆದರೆ ಎಸ್‍ಪಿ ಮುಂದೆ ಕಾಶಿನಾಥ ತಪ್ಪೊಪ್ಪಿಕೊಂಡು ದೂರು ವಾಪಸ್ ಪಡೆಯುವುದಾಗಿ ಹೇಳಿದ್ದಾನೆಂಬ ಮಾಹಿತಿ ದೊರೆತಿದೆ.


Spread the love

About Laxminews 24x7

Check Also

ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Spread the loveವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದರೂ ಆದೇಶ ಪಡೆಯದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ