ಶಿವಮೊಗ್ಗ: ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಜೆಟ್ ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿತ್ತು. ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು. ರಾಜ್ಯದ ಜನರು ಕಟ್ಟುವ ತೆರಿಗೆ ಹಣ ದುರ್ಬಳಿಕೆ ಆಗುತ್ತಿದೆ ಎಂದರು.
ರಾಜ್ಯದ ರಾಜಕಾರಣದಲ್ಲಿ ದೊಡ್ಡಮಟ್ಟದಲ್ಲಿ ಚರ್ಚಗೆ ಗ್ರಾಸವಾದ ವಿಷಯಗಳನ್ನ ಮಾತನಾಡಿಲ್ಲ. ಕಳೆದ ಒಂದು ವರ್ಷದಿಂದ ಕೋವಿಡ್ ಇದ್ದರಿಂದ ನಾನು ಯಾವ ವಿಷಯಗಳನ್ನ ಮಾತನಾಡಿಲ್ಲ. ರೈತರು ಬೆಳದಂತಹ ಬೆಳೆಗಳು ನಾಶವಾಗಿವೆ. ಭಗವಂತನ ದಯೆಯಿಂದ ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದೆ. ನಾನು ಜುಲೈ ಅಧಿಕಾರದಿಂದ ನಿರ್ಗಮಿಸಿದ್ದೆ. ಅಲ್ಲಿಂದ ಇಲ್ಲಿಯವರೆಗೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಕಳೆದೊಂದು ವರ್ಷದಿಂದ ನಾನು ನಿಷ್ಕ್ರಿಯನಾಗಿದ್ದೇನೆ ಅದಕ್ಕೆ ಕಾರಣ ವೈದ್ಯರ ಸಲಹೆ. ನಾನು ಪಕ್ಷದ ಸಂಘಟನೆಗೆ ಚಾಲನೆ ನೀಡಲು ತೀರ್ಮಾನ ಮಾಡಿದ್ದೇನೆ ಎಂದರು.