Breaking News
Home / ರಾಜ್ಯ / ಕರ್ತವ್ಯನಿರತ ಕೆಎಸ್‌ಆರ್​ಟಿಸಿ ಬಸ್​ ಕಂಡಕ್ಟರ್​ಗೆ ಹೃದಯಾಘಾತ, ಸಾವು

ಕರ್ತವ್ಯನಿರತ ಕೆಎಸ್‌ಆರ್​ಟಿಸಿ ಬಸ್​ ಕಂಡಕ್ಟರ್​ಗೆ ಹೃದಯಾಘಾತ, ಸಾವು

Spread the love

ನೆಲಮಂಗಲ: ಕರ್ತವ್ಯನಿರತ ಕೆಎಸ್‌ಆರ್​ಡಿಸಿ ಬಸ್ ನಿರ್ವಾಹಕರೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಗರದಲ್ಲಿ ಸಂಭವಿಸಿದೆ.

ಹೊಳೆನರಸೀಪುರ ಮೂಲದ ಟಿ.ಎನ್.ಸೋಮೇಶ್(32) ಮೃತ. ನೆಲಮಂಗಲ ಡಿಪೋ ಬಸ್​ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೋಮೇಶ್​, ಇಂದು ನೆಲಮಂಗಲದ ಬಳಗೆರೆಯಿಂದ ಕೆ.ಆರ್.ಮಾರ್ಕೆಟ್​ಗೆ ಹೊರಟ ಬಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಸ್​ನಲ್ಲೇ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು.

ಸಾವು ಯಾವಾಗ? ಯಾವ ರೂಪದಲ್ಲಿ? ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ. ದುಡಿಮೆಗಾಗಿ ಮನೆಬಿಟ್ಟು ಬೇರೆ ಊರಿಗೆ ಬಂದ ಮಗ ಹೆಣವಾಗಿ ಬರುತ್ತಿರುವ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ