ಬೆಂಗಳೂರು: ಬೆಂಗಳೂರು ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವ ಮಂದಿಯ ವಿರುದ್ದ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಅವರು ಆದೇಶಿಸಿದ್ದಾರೆ. ಬೆಂಗಳೂರು ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವ ಮಂದಿಯಿಂದ ಮಂದಿಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುತ್ತಿದ್ದು, ಇದರಿಂದ ತೊಂದರೆ ಉಂಟಾಗುತ್ತಿದೆ ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅನೇಕ ಮಂದಿ ಪೊಲೀಸರಿಗೆ ಸೂಚನೆ ನೀಡಿದ್ದರು.
ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಅಯಾ ವ್ಯಾಪ್ತಿಯ ಟ್ರಾಫಿಕ್ ಪೋಲಿಸ್ ಠಾಣೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, . ಲಾ ಅಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದು, ಈ ಹಿನ್ನಲೆಯಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಪೊಲೀಸರು ಕಾರ್ಯಚರಣೆಗೆ ಇಳಿದಿದ್ದಾರೆ.