ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ. ಪಿ ಅವರು ಅಧಿಕಾರಿ ಸ್ವೀಕರಿಸಿದರು.
ಮೂಲತಃ ತಮಿಳುನಾಡಿನ ಮಧುರೈ ನವರಾದ ಅವರು 2013 ರ ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು, ಪ್ರೋಬೆಷನರಿ ಅವಧಿಯನ್ನು ಬಳ್ಳಾಯರಿಯಲ್ಲಿ ಪೂರೈಸಿದ್ದಾರೆ. ಜಮಖಂಡಿ ಉಪವಿಭಾಗಾಧಿಕಾರಿಯಾಗಿ, ಬೆಳಗಾವಿ ಸ್ಮಾರ್ಟ್ ಸಿಟಿಯ ಎಂಡಿಯಾಗಿ, ಶಿವಮೊಗ್ಗ ಮಹಾನಗರ ಪಾಲಿಕೆಯ ಕಮಿಷನರ್ ಆಗಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಂಡಿ, ರಾಮನಗರ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.