Breaking News

ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

Spread the love

ಗದಗ: ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.

ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು.

 

ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ಹಿನ್ನೆಲೆಯಲ್ಲಿ ಬೆಟಗೇರಿ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ