Breaking News

ಪಿಎಂ ಕೇರ್ಸ್​ ಲೆಕ್ಕವನ್ನೇ ಕೊಡದವರು ರಾಮ ಮಂದಿರ ಹಣದ ಲೆಕ್ಕಾ ಕೊಡ್ತಾರ?; ಸಿದ್ದರಾಮಯ್ಯ

Spread the love

ಬೆಂಗಳೂರು (ಫೆಬ್ರವರಿ 16); ಕೊರೋನಾ ಸಂದರ್ಭದಲ್ಲಿ ಜನರಿಂದ ಸಂಗ್ರಹಿಸಲಾದ ಪಿಎಂ ಕೇರ್ಸ್​ ಹಣದ ಲೆಕ್ಕವನ್ನೇ ಕೊಡದವರು, ಇದೀಗ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲು ಮುಂದಾಗಿರುವ ಹಣದ ಲೆಕ್ಕ ಕೊಡ್ತಾರಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ ನೀಡುತ್ತಿದ್ದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು. ಅಲ್ಲದೆ, ದೇವಾಲಯ ನಿರ್ಮಾಣಕ್ಕೆ “ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್”​ ಸಹ ರೂಪಿಸಲಾಗಿತ್ತು. ಈ ಟ್ರಸ್ಟ್​​ ಜನರಿಂದ ದೇಣಿಗೆ ಸ್ವೀಕರಿಸಿ ಆ ಹಣದಿಂದ ದೇವಾಲಯ ನಿರ್ಮಾಣ  ಮಾಡಲು ಮುಂದಾಗಿದೆ. ಆದರೆ, ಈ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆರಂಭದಿಂದಲೂ ಕಟುವಾಗಿ ಟೀಕಿಸುತ್ತಲೇ ಇದ್ದಾರೆ.

ಈ ಕುರಿತು ಇಂದು ಸರಣಿ ಟ್ವೀಟ್​ ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಆರ್​ಎಸ್​ಎಸ್​ ಕಾಲೆಳೆದಿರುವ ಸಿದ್ದರಾಮಯ್ಯ, “ಸಾರ್ವಜನಿಕರಿಂದ ಹಣ ಸಂಗ್ರಹಿಸುವವವರು ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಪಿಎಂ ಕೇರ್ಸ್ ನಿಧಿಯ ಲೆಕ್ಕವನ್ನೇ ಕೊಡದಿರುವ ಈಗಿನ ಬಿಜೆಪಿ ಸರ್ಕಾರ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸುವ ಹಣದ ಲೆಕ್ಕ ನೀಡುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ, “ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇದೇ ಬಿಜೆಪಿ ಹಿಂದೊಮ್ಮೆ ರಾಮ ಮಂದಿರ ನಿರ್ಮಾಣಕ್ಕಾಗಿ ಇಟ್ಟಿಗೆ-ಹಣ ಸಂಗ್ರಹಿಸಿತ್ತಲ್ಲಾ, ಅದು ಏನಾಯಿತೆಂದು ಯಾರಿಗೂ ಗೊತ್ತಿಲ್ಲ.‌ ಅದರ ಲೆಕ್ಕವನ್ನು ಬಿಜೆಪಿ ಪಕ್ಷ ಮೊದಲು ಸಾರ್ವಜನಿಕರಿಗೆ ನೀಡಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ರಾಮ ಮಂದಿರ ನಿರ್ಮಾಣಕ್ಕೆ ಜನರಿಂದ ದೇಣಿಗೆ ಸಂಗ್ರಹಿಸಲು ಮುಂದಾಗಿರುವ ಆರ್​ಎಸ್​ಎಸ್​ ಕಾರ್ಯಕರ್ತರು ಹಣ ನೀಡದವರ ಮನೆಯನ್ನು ಗುರುತು ಮಾಡುತ್ತಿದೆ. ಈ ಕುರಿತು ಸೋಮವಾರವೇ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ