Breaking News

ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಖಂಡಿಸಿಕಾಂಗ್ರೆಸ್ನಡೆಸಿರುವ ಪ್ರತಿಭಟನೆಗೆ ರಮೇಶ್ ಜಾರಕಿಹೊಳಿ ವ್ಯಂಗ್ಯವಾಗಿಡಿದ್ದಾರೆ.

Spread the love

ಬೆಳಗಾವಿ:  ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಾಯಕರು ನಡೆಸಿರುವ ಪ್ರತಿಭಟನೆಗೆ ಸಚಿವ ರಮೇಶ್ ಜಾರಕಿಹೊಳಿ ವ್ಯಂಗ್ಯವಾಗಿಡಿದ್ದಾರೆ. ನಾವು ಬದುಕಿದ್ದೆವೆ ಎನ್ನುವುದನ್ನು ವಿರೋಧ ಪಕ್ಷಗಳು ತೋರಿಸುತ್ತಿದ್ದಾರೆ ಎಂದಿದ್ದಾರೆ.

ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ತಮ್ಮ ಕೆಲಸವನ್ನು ಮಾಡಿತ್ತಿವೆ. ನಾವು ಸಹ ಬದುಕಿದ್ದೆವೆ ಎಂಬುವುದನ್ನು ತೋರಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ನಾನು ಏನು ಮಾಡಿದ್ದೆನೆ ಎಂಬುವುದು ಜನರಿಗೆ ಗೊತ್ತಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಶೀಘ್ರದಲ್ಲಿ ಬಡವರ ಪರವಾಗಿ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬಿಜೆಪಿ ಒಂದೇ ಸ್ಥಾನ ಹೊಂದಿತ್ತು. ಆದ ಕಾರಣ ಯುವರಾಜ್ ಕದಂ ಅವರನ್ನು ನೇಮಕ ಮಾಡಿದ್ದು ನಾನೇ ಎಂದು ಹೇಳಿದ್ದಾರೆ. ಜತೆಗೆ ಹೆಚ್.ವಿಶ್ವನಾಥ್ , ಉಮೇಶ್ ಕತ್ತಿಗೆ ಸ್ಥಾನಮಾನ ನೀಡುವ ವಿಚಾರ ಬಿಜೆಪಿ ಹೈಕಮಾಂಡ್ ಬಿಟ್ಟಿದ್ದು, ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೇನೆೆ ಎಂದು ಹೇಳಿದರು


Spread the love

About Laxminews 24x7

Check Also

ಪಂಚ ಗ್ಯಾರಂಟಿಗಳಿಗಾಗಿ ₹63 ಸಾವಿರ ಕೋಟಿ ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

Spread the love ಬೆಂಗಳೂರು: ಪಂಚ ಗ್ಯಾರಂಟಿಗಳಿಗಾಗಿ 2023-24 ಸಾಲಿನಲ್ಲಿ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ