Breaking News
Home / Uncategorized / ಕೃಷಿ ಕಾಯ್ದೆ ವಿರೋಧಿಸಿ “ರೈಲ್ ರೋಖೋ” ಚಳುವಳಿ, ಪ್ರತಿಭಟನಾಕಾರರು ವಶಕ್ಕೆ

ಕೃಷಿ ಕಾಯ್ದೆ ವಿರೋಧಿಸಿ “ರೈಲ್ ರೋಖೋ” ಚಳುವಳಿ, ಪ್ರತಿಭಟನಾಕಾರರು ವಶಕ್ಕೆ

Spread the love

: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರೋ ರೈತರು ಇಂದು ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ವಿಜಯಪುರ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಹಲವಾರು ರೈತರು ರೈಲು ತಡೆಯಲು ಮುಂದಾಗಿದ್ದು, ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ವಿಜಯಪುರ ರೈತರು ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೈತರು, ಕಾರ್ಮಿಕ ಸಂಘಟನೆಗಳು ಸೇರಿ ವಿಜಯಪುರದಲ್ಲಿ ರೈಲ್​ ರೊಕೋ ಚಳವಳಿಗೆ ಮುಂದಾಗಿದ್ದವು. ಆದ್ರೆ ಇಂದು ಬೆಳಗ್ಗೆ ರೇಲ್ವೆ ನಿಲ್ದಾಣಕ್ಕೆ ಆಗಮಿಸಿದ ರೈತರು ನಿಲ್ದಾಣದ ಒಳಗೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದು, ಪ್ರವೇಶ ದ್ವಾರಕ್ಕೆ ಬ್ಯಾರಿಕೇಡ್ ಹಾಕಿದ್ದಾರೆ.

ಸ್ಥಳದಲ್ಲಿ ಒಂದು ಡಿಎಆರ್​ ತುಕಡಿ, ಓರ್ವ ಸಿಪಿಐ, ಮೂವರು ಪಿಎಸ್‌ಐ ಹಾಗೂ ಮೂವತ್ತಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ರೈಲ್ವೇ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಹೋರಾಟಗಾರರು ಪ್ರತಿಭಟನೆಗೆ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬಸವ ಎಕ್ಸ್​ಪ್ರೆಸ್ ರೈಲು​ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರ ಕಾವಲಿನ ನಡುವೆಯೂ ಪ್ರತಿಭಟನಾಕಾರರು ರೈಲನ್ನ ತಡೆಯಲು ಮುಂದಾದ್ರು. ಈ ಸಮಯದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ