Home / ಕಾರವಾರ / ಒಂಟಿಯಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ: ಕಾರವಾರ ತಲುಪಿದ ಕೊಲ್ಕತ್ತಾ ವ್ಯಕ್ತಿ

ಒಂಟಿಯಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ: ಕಾರವಾರ ತಲುಪಿದ ಕೊಲ್ಕತ್ತಾ ವ್ಯಕ್ತಿ

Spread the love

ಕಾರವಾರ: ಕೊಲ್ಕತ್ತಾದ ಈ ವ್ಯಕ್ತಿಯು, ದೇಶ ಪರ್ಯಟನೆಗೆ ಆಯ್ಕೆ ಮಾಡಿದ್ದು ಸೈಕಲ್ ಸವಾರಿಯನ್ನು. ಜ.1ರಂದು ಪ್ರಯಾಣ ಆರಂಭಿಸಿ, ಗುರುವಾರ ಕಾರವಾರಕ್ಕೆ ತಲುಪಿ ಗೋವಾದತ್ತ ಸಾಗಿದರು.

54 ವರ್ಷದ ಪರಿಮಳ ಕಾಂಜಿ ಎಂಬುವವರೇ ಇಂಥ ಸಾಹಸ ಮಾಡುತ್ತಿರುವವರು. ಕೊಲ್ಕತ್ತಾದ ಬೋಡೊ ಬಜಾರ್ ನಿವಾಸಿಯಾಗಿರುವ ಇವರು, ದೇಶದ ವಿವಿಧ ಸಂಸ್ಕೃತಿಗಳನ್ನು ಪರಿಚಯಿಸಿಕೊಳ್ಳುವುದು, ಪರಿಸರ ಸಂರಕ್ಷಣೆ, ಸಸ್ಯ ಸಂಪತ್ತಿನ ಪಾಲನೆ ಹಾಗೂ ನೀರಿನ ರಕ್ಷಣೆಯ ಬಗ್ಗೆ ಅರಿವು ಮೂಡಿಸುತ್ತ ಸೈಕಲ್ ತುಳಿಯುತ್ತಿದ್ದಾರೆ.

ದೇಶದ ಕರಾವಳಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕದ ಮೂಲಕ ಗೋವಾ, ಮಹಾರಾಷ್ಟ್ರ, ಗುಜರಾತ್ ಮೂಲಕ ಸಾಗುವುದು ಅವರ ಗುರಿಯಾಗಿದೆ.

’48 ದಿನಗಳಿಂದ ಸೈಕಲ್‌ನಲ್ಲಿ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದೇನೆ. ದಿನವೊಂದಕ್ಕೆ 100ರಿಂದ 120 ಕಿಲೋಮೀಟರ್ ದೂರ ಸಾಗುತ್ತೇನೆ. ಒಂದು ವರ್ಷದ ಅವಧಿಯಲ್ಲಿ ಇಡೀ ದೇಶವನ್ನು ಸಂಚರಿಸುವ ಗುರಿ ಹೊಂದಿದ್ದೇನೆ. ಸಾಗಬೇಕಾದ ದಾರಿಗೆ ‍ಪುಸ್ತಕದಲ್ಲಿರುವ ನಕ್ಷೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಅವರು ಸುದ್ದಿಗಾರರಿಗೆ ವಿವರಿಸಿದರು.

‘ಇಷ್ಟು ದಿನದ ಪ್ರಯಾಣದಲ್ಲಿ ನನಗೆ ಹಣದ ಅವಶ್ಯಕತೆಯೇ ಬಂದಿಲ್ಲ. ನನ್ನನ್ನು ಕಂಡು ಮಾತನಾಡಿಸುವ ಜನರೇ ಊಟ, ತಿಂಡಿ, ಪಾನೀಯ ನೀಡುತ್ತಿದ್ದಾರೆ. ಮೊಬೈಲ್ ಫೋನ್ ಚಾರ್ಜ್ ಮಾಡಲೆಂದು ಯಾರೋ ಒಬ್ಬರು ಸೌರ ಫಲಕವನ್ನು ನನಗೆ ನೀಡಿದ್ದಾರೆ. ಅದನ್ನು ಸೈಕಲ್‌ನಲ್ಲಿ ಅಳವಡಿಸಿದ್ದು, ಬಳಕೆ ಮಾಡಿಕೊಳುತ್ತಿದ್ದೇವೆ. ಈವರೆಗೆ ಏಳು ಬಾರಿ ಸೈಕಲ್‌ನ ಚಕ್ರ ಬದಲಾಯಿಸಿದ್ದೇನೆ’ ಎಂದು ತಮ್ಮ ಪ್ರಯಾಣದ ವಿವರನ್ನು ಬಿಡಿಸಿಟ್ಟರು.


Spread the love

About Laxminews 24x7

Check Also

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

Spread the loveನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ