ಇಂದು ಮರಾಠ ಸಾಮ್ರಾಟ ಛತ್ರಪತಿ ಶಿವಾಜಿಯವರ 391ನೇ ಜಯಂತೋತ್ಸವ. ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು. ಜೀಜಾಬಾಯಿ ಅವರ ಪ್ರೇರಣಾತ್ಮಕ ಮಾತುಗಳಿಂದಲೇ ಶಿವಾಜಿ ಬಾಲ್ಯದಲ್ಲೇ ಮರಾಠ ಸಾಮ್ರಾಜ್ಯದ ಕನಸನ್ನು ಕಂಡವರು.
ಶಿವಾಜಿ, ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಕೆಲ ಇತಿಹಾಸಕಾರರು ಹೇಳುತ್ತಾರೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶಿವಾಜಿಯವರ ಸಾಹಸಗಾಥೆ ಒಂದು ಪ್ರೇರಣೆ ಎನ್ನುವ ದೃಷ್ಟಿಯಲ್ಲಿ ಭಾರತದ ಸಹಸ್ರ ಸಹಸ್ರ ಮಂದಿ ಶಿವಾಜಿಯನ್ನು ಅನುಸರಿಸುವವರಿದ್ದಾರೆ.
ಇಡೀ ದೇಶದಾದ್ಯಂತ ಇಂದು ಶಿವಾಜಿ ಮಹಾರಾಜ್ ಅವರ 391ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಇನ್ನು, ಮಹಾರಾಷ್ಟ್ರ ಸರ್ಕಾರ ಈ ದಿನವನ್ನು ಶಿವಾಜಿಯವರಿಗೆ ಸಲ್ಲಿಸುವ ಗೌರವಾರ್ಥವಾಗಿ ಸರ್ಕಾರಿ ರಜಾ ದಿನವೆಂದು ಘೋಷಿಸಿದೆ.
ಈ ಶುಭ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ ಸಂತೋಷ್ ಜಾರಕಿಹೊಳಿ.