Breaking News

ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಕೊರೊನಾ ಚಿಕಿತ್ಸೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ, ಬಾಯಿ ಮಾತಿನಲ್ಲಿ ಹೇಳಿದರೆ ನಡೆಯುವುದಿಲ್ಲ. ದಾಖಲೆ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬಳಿಕ ಮಾತನಾಡಿದ ಅವರು,  ವೈದ್ಯಕೀಯ ಉಪಕರಣಗಳ ಖರೀದಿಯ ಖರ್ಚು ವೆಚ್ಚದ ಲೆಕ್ಕ ಕೊಡಿ ಎಂದರೆ ಹೀಗೆ ಇವರು ಬಾಯಿ ಮಾತಿನಲ್ಲಿ ಕೊಟ್ಟರೆ ಆಗುತ್ತಾ? ಏನೇನು ಖರೀದಿ ಮಾಡಲಾಗಿದೆ, ಎಷ್ಟೆಷ್ಟು ಖರ್ಚು ಮಾಡಲಾಗಿದೆ ಎಂಬ ಲೆಕ್ಕ ಬೇಡವೇ ಎಂದು ಪ್ರಶ್ನಿಸಿದರು.

ಇವರು ಬಾಯಿ ಮಾತಲ್ಲಿ ಹೇಳಿದರೆ ಹೇಗೆ? ದಾಖಲೆಗಳನ್ನು ತೋರಿಸಿಸಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಸವಾಲೆಸೆದರು.

ಅವ್ಯವಹಾರ ಆರೋಪ ಸಾಬೀತುಪಡಿಸಿದರೆ ರಾಜೀನಾಮೆ ನೀಡುತ್ತೇನೆಂಬ ಶ್ರೀರಾಮುಲು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಾಜೀನಾಮೆ ಕೊಡಬೇಕಿದ್ದಿದ್ರೆ ಇವರು ಯಾಕೆ ಇಲ್ಲಿ ಇರಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

ಆರೋಗ್ಯ ಸಚಿವ ಬಿ. ಶ್ರೀರಾಮಲು  ಸುದ್ದಿಗೋಷ್ಟಿ ನಡೆಸಿ, ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಅವ್ಯವಹಾರ ನಡೆದಿದೆ ಎಂಬುವುದು ಸಾಬೀತಾದ್ರೆ ರಾಜೀನಾಮೆ ನೀಡಿ ಹೋಗುತ್ತೇನೆ ಎಂದಿದ್ರು


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ