ಬೆಂಗಳೂರು : ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮವೊಂದನ್ನು ಕೈಗೊಂಡಿದ್ದು, ದೂರ ಮಾರ್ಗಗಳಿಗೆ ಬಸ್ ಚಲಾಯಿಸುವ ಕೆಎಸ್ ಆರ್ ಟಿಸಿ ಚಾಲಕರು ಮಾರ್ಗಮಧ್ಯೆ ವಿಶ್ರಾಂತಿ ಪಡೆಯಲು ತನಿಖಾ ಬಿಂದುಗಳನ್ನು ಸ್ಥಾಪಿಸಲಾಗಿದೆ.
ದೂರದ ಮಾರ್ಗಗಳಿಗೆ ಸಂಚರಿಸುವ ವಾಹನಗಳ ಚಾಲಕರಿಗೆ ವಿಶ್ರಾಂತಿಯಿಲ್ಲದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುತ್ತಿದೆ. ಹೀಗಾಗಿ ಚಾಲಕರು ಮಾರ್ಗಮಧ್ಯೆ 15 ನಿಮಿಷ ಕಡ್ಡಾಯವಾಗಿ ವಿಶ್ರಾಂತಿ ಪಡೆಯಲು ಕೆಎಸ್ಆರ್ ಟಿಸಿ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.
ಕೆಎಸ್ಆರ್ ಟಿಸಿ ಬಸ್ ಚಾಲಕರು ಮಧ್ಯರಾತ್ರಿ 1 ಗಂಟೆಯಿಂದ ಬೆಳಗಿನ ಜಾವ 5 ಗಂಟೆ ನಡುವೆ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.
Laxmi News 24×7