Breaking News

ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ಬರೋ ಸವಾರರ ಬಳಿ ದುಪ್ಪಟ್ಟು ಹಣ ವಸೂಲಿ, ಗುತ್ತಿಗೆದಾರನ ಆಟಟೋಪಕ್ಕೆ ಇಲ್ವಾ ಬ್ರೇಕ್?

Spread the love

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರದ ನಂದಿಗಿರಿಧಾಮದ ಪ್ರಕೃತಿ ಸೌಂದರ್ಯ ಸವಿಯಲು ರಾಜಧಾನಿಯ ಜನ ಸೇರಿದಂತೆ ಸಾವಿರಾರು ಪ್ರವಾಸಿಗರು ನಿತ್ಯ ಲಗ್ಗೆ ಇಡ್ತಾರೆ. ಹೀಗೆ ಗಿರಿಧಾಮಕ್ಕೆ ಬರುವ ಬೈಕ್ ಸವಾರ ಪ್ರವಾಸಿಗಳಿಂದ ಗಿರಿಧಾಮದಲ್ಲಿ ಅಕ್ರಮ ವಸೂಲಿ ನಡೆಯುತ್ತೆ ಅನ್ನೋ ಮಾಹಿತಿ ಟಿವಿ9ಗೆ ಸಿಕ್ಕಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಗುತ್ತಿಗೆದಾರ ಸತ್ಯನಾರಾಯಣ, ಹೆಲ್ಮೆಟ್ ಸಂಗ್ರಹ ನೆಪದಲ್ಲಿ ಬೈಕ್ ಸವಾರರಿಂದ ನಿಗದಿಗಿಂತ ಐದಾರು ಪಟ್ಟು ಹೆಚ್ಚು ಹಣ ವಸೂಲಿ ಮಾಡ್ತಿರುವ ದೃಶ್ಯ ಕಂಡು ಬಂತು.

ನಂದಿಗಿರಿಧಾಮದಲ್ಲಿ ಸತ್ಯನಾರಾಯಣ ಅನ್ನೊ ಗುತ್ತಿಗೆದಾರನಿಗೆ ರಾಜ್ಯ ತೋಟಗಾರಿಕೆ ಇಲಾಖೆ, ಗಿರಿಧಾಮಕ್ಕೆ ಬರೋ ಪ್ರವಾಸಿಗಳ ಹೆಲ್ಮೆಟ್‌ ಸಂಗ್ರಹಿಸಿ ನಂತರ ವಾಪಸ್ ಕೊಡಲು ತಲಾ ಐದು ರೂಪಾಯಿ ಹಾಗೂ ಬ್ಯಾಗ್‌ಗೆ ಐದು ರೂಪಾಯಿ ದರ ನಿಗದಿ ಮಾಡಿದೆ. ಆದ್ರೆ ಸತ್ಯನಾರಾಯಣ ಪ್ರವಾಸಿಗಳಿಂದ ಒಂದು ಹೆಲ್ಮೆಟ್ ಹಾಗೂ ಒಂದು ಬ್ಯಾಗ್​ಗೆ 20-30, 40 ರೂಪಾಯಿಯಂತೆ ವಸೂಲಿ ಮಾಡ್ತಿದ್ದಾನೆ. ಸ್ವತಃ ಟಿವಿ9 ಪ್ರತಿನಿಧಿ ಹೆಲ್ಮೆಟ್ ಇಟ್ಟು ವಾಪಸ್ ಪಡೆದಾಗ ಐದು ರೂಪಾಯಿ ಬದಲು 30 ರೂಪಾಯಿ ಹಣ ವಸೂಲಿ ಮಾಡಿದ್ದು, ವಿಡಿಯೊ ರೆಕಾರ್ಡ ಆಗಿದೆ.

ಗಿರಿಧಾಮದಲ್ಲಿ ಈಗಾಗಲೇ ಹೆಜ್ಜೆ ಹೆಜ್ಜೆಗೂ ದುಬಾರಿ ದುನಿಯಾ ಕಾಡ್ತಿದೆ. ಆದ್ರೆ ಗುತ್ತಿಗೆದಾರ ಸರ್ಕಾರ ನಿಗದಿ ಮಾಡಿದ ದರ ಬಿಟ್ಟು ಪ್ರವಾಸಿಗರ ಬ್ಯಾಗ್ ಹಾಗೂ ಹೆಲ್ಮೆಟ್‌ಗೆ ಮನಸ್ಸೊ ಇಚ್ಚೆ ಹಣ ವಸೂಲಿ ಮಾಡ್ತಿದ್ದಾನೆ. ಈ ಗುತ್ತಿಗೆದಾರನ ಆಟಟೋಪಕ್ಕೆ ಸಂಬಂಧ ಪಟ್ಟವರು ಬ್ರೇಕ್ ಹಾಕಬೇಕಿದೆ.

 


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ