Breaking News

ನಾನೀಗ BSY ಸ್ಥಾನದಲ್ಲಿದ್ದಿದ್ರೆ ನನ್ನ ರಕ್ತ ಹೀರೋರು, ಚರ್ಮ ಸುಲಿಯೋರು: ಕುಮಾರಸ್ವಾಮಿ

Spread the love

ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇಂದಿನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನಾನು ಸಿಎಂ ಸ್ಥಾನದಿಂದ ಇಳಿಯುತ್ತಿದ್ದಂತೆ ಪ್ರವಾಹ ಬಂತು, ಕೊರೊನಾ ಬಂತು. ಇದೆಲ್ಲವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆದರೂ ಈ ಸರ್ಕಾರನೇ ಗ್ರೇಟ್ ಅಂತ ಸರ್ಟಿಫಿಕೇಟ್ ಕೊಡ್ತಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನಾನು ಎಷ್ಟೇ ಒಳ್ಳೆ ಕೆಲಸ ಮಾಡಿದ್ರು ಯಾರು ನನ್ನ ಪರ ನಿಂತಿಲ್ಲ. ಕೆಟ್ಟ ಕೆಲಸ ಮಾಡಿದವರನ್ನೇ, ಹಗಲು ದರೋಡೆ ಮಾಡಿದವರನ್ನೇ ಇದೇ ಸರ್ಕಾರ ಸರಿ ಅಂತ ಸರ್ಟಿಫಿಕೇಟ್ ಕೊಡುತ್ತೆ ಎಂದು ಹೇಳಿದ್ದಾರೆ.

ಒಂದು ವೇಳೆ ನಾನೇನಾದ್ರೂ ಈಗ ಯಡಿಯೂರಪ್ಪ ಅವರ ಸ್ಥಾನದಲ್ಲಿದಿದ್ದರೆ ನನ್ನ ರಕ್ತ ಹೀರಿ, ಚರ್ಮ ಸುಲಿದು ಬಿಡೋರು ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26

Spread the love ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26 ಮೊಬೈಲ್ ಗೀಳಿನಿಂದ ಹೊರ ಬಂದು ಕ್ರೀಡೆ-ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ