ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇಂದಿನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನಾನು ಸಿಎಂ ಸ್ಥಾನದಿಂದ ಇಳಿಯುತ್ತಿದ್ದಂತೆ ಪ್ರವಾಹ ಬಂತು, ಕೊರೊನಾ ಬಂತು. ಇದೆಲ್ಲವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆದರೂ ಈ ಸರ್ಕಾರನೇ ಗ್ರೇಟ್ ಅಂತ ಸರ್ಟಿಫಿಕೇಟ್ ಕೊಡ್ತಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ನಾನು ಎಷ್ಟೇ ಒಳ್ಳೆ ಕೆಲಸ ಮಾಡಿದ್ರು ಯಾರು ನನ್ನ ಪರ ನಿಂತಿಲ್ಲ. ಕೆಟ್ಟ ಕೆಲಸ ಮಾಡಿದವರನ್ನೇ, ಹಗಲು ದರೋಡೆ ಮಾಡಿದವರನ್ನೇ ಇದೇ ಸರ್ಕಾರ ಸರಿ ಅಂತ ಸರ್ಟಿಫಿಕೇಟ್ ಕೊಡುತ್ತೆ ಎಂದು ಹೇಳಿದ್ದಾರೆ.
ಒಂದು ವೇಳೆ ನಾನೇನಾದ್ರೂ ಈಗ ಯಡಿಯೂರಪ್ಪ ಅವರ ಸ್ಥಾನದಲ್ಲಿದಿದ್ದರೆ ನನ್ನ ರಕ್ತ ಹೀರಿ, ಚರ್ಮ ಸುಲಿದು ಬಿಡೋರು ಎಂದಿದ್ದಾರೆ.