ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನವು ಮಾರ್ಚ್ 4ರಿಂದ ಆರಂಭವಾಗಲಿದ್ದು, ಇದು ಮಾ.31ರ ತನಕ ಮುಂದುವರಿಯಲಿದೆ.
ಮಾರ್ಚ್ 8ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿರುವರು. ಈ ಬಗ್ಗೆ ಶಾಸಕಾಂಗದ ಕಾರ್ಯದರ್ಶಿ ಎಂ.ಕೆ. ವಿಜಯಲಕ್ಷ್ಮೀ ಅವರು ಅಧಿಸೂಚನೆ ಜಾರಿ ಮಾಡಿರುವರು.
ಮಾ.4 ಮತ್ತು 5ರಂದು ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ವಿಶೇಷ ಚರ್ಚೆಯು ನಡೆಯಲಿದೆ. ಇದು ಈ ಬಜೆಟ್ ಅಧಿವೇಶನದ ಆಕರ್ಷಣೆಯಾಗಿರಲಿದೆ.