Breaking News

ರೈತರೊಬ್ಬರಿಂದ ಆರು ಸಾವಿರ ರೂಪಾಯಿ ಗಳ ಲಂಚ ಪಡೆಯುತ್ತಿದ್ದ ವೇಳೆ ಗಂಗಾವತಿ ತಹಸೀಲ್ದಾರಎಸಿಬಿ‌‌ ಬಲೆಗೆ

Spread the love

ಕೊಪ್ಪಳ:  ಜಮೀನಿನ ಖಾತಾ ಉತಾರ ಬದಲಾವಣೆಗೆ ಸಂಬಂಧಿಸಿದಂತೆ ರೈತರೊಬ್ಬರಿಂದ ಆರು ಸಾವಿರ ರೂಪಾಯಿ ಗಳ ಲಂಚ ಪಡೆಯುತ್ತಿದ್ದ ವೇಳೆ ಗಂಗಾವತಿ ತಹಸೀಲ್ದಾರ, ಮತ್ತು ಭೂಮಿ ಕೇಂದ್ರದ ತಹಸೀಲ್ದಾರ್  ‌ ಎಸಿಬಿ‌‌ ಬಲೆಗೆ ಬಿದಿದ್ದಾರೆ.

ಎಸಿಬಿ‌ ಡಿಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ  ಗಂಗಾವತಿ ತಹಸೀಲ್ದಾರ ಎಲ್.ಡಿ.ಚಂದ್ರಕಾಂತ ಹಾಗೂ ಭೂಮಿ ಕೇಂದ್ರದ ಶಿರಸ್ತೆದಾರ ಶರಣಪ್ಪ ಅವರು ವಡ್ಡರಹಟ್ಟಿಯ ಸುಂದರರಾಜ ಎಂಬ ರೈತರಿಂದ ಜಮೀನಿನ ಖಾತಾ ಬದಲಾವಣೆಗೆ ರೂ.6  ಸಾವಿರ ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ರೈತನಿಂದ ಲಂಚ ಸ್ವೀಕರಿಸುವಾಗ ಸಿಕ್ಕುಬಿದಿದ್ದಾರೆ.

ಎಸಿಬಿ ಬಳ್ಳಾರಿ ಎಸ್ಪಿ‌ ಬಿ.ಎಸ್ ನೇಮಗೌಡ ಅವರ ಮಾರ್ಗದರ್ಶನ ನದಲ್ಲಿ ಡಿಎಸ್ಪಿ ಆರ್.ಉಜ್ಜನಕೊಪ್ಪ, ಪೊಲೀಸ್ ಇನ್ಸಪೇಕ್ಟರ್ ಎಸ್.ಎಸ್.ಬೀಳಗಿ,‌ ಗುರುರಾಜ, ಹಾಗೂ ಸಿಬ್ನಂದಿಗಳು ನಡೆಸಿದ ದಾಳಿವೇಳೆ ತಹಸೀಲ್ದಾರ ಹಾಗೂ ಶಿರಸ್ತೆದಾರರು ಬಲೆಗೆ ಒಳಗಾಗಿದ್ದು, ತನಿಖೆ ಮುಂದುವರೆದಿದೆ.

 


Spread the love

About Laxminews 24x7

Check Also

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Spread the loveಕೊಪ್ಪಳ: ತಾಲೂಕಿನ  ಕೂಕನಪಳ್ಳಿ ಗ್ರಾಮದಲ್ಲಿ  ಸ್ಪಿರಿಟ್  ಕುಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಾವು ಬದುಕಿನ ನಡುವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ