Breaking News

ಯತ್ನಾಳ್ ಹಿಂದುತ್ವವಾದಿ ಎಂಬುದಕ್ಕೆ ಖುಷಿ ಇದೆ, ಆದರೂ ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು; ಈಶ್ವರಪ್ಪ

Spread the love

ಶಿವಮೊಗ್ಗ (ಫೆಬ್ರವರಿ 23); ಇತ್ತೀಚಿನ ದಿನಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಯಡಿಯೂರಪ್ಪ  ವಿರುದ್ದ ಒಂದರ ಹಿಂದೊಂದರಂತೆ ಹೇಳಿಕೆ ನೀಡುತ್ತಲೇ ಇದ್ದಾರೆ. ಇದರಿಂದ ಪಕ್ಷದ ಒಳಗೆ ಮುಜುಗರದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಶಾಸಕ ಯತ್ನಾಳ್​ಗೆ ನೊಟೀಸ್​ ಸಹ ಜಾರಿ ಮಾಡಿದ್ದಾರೆ. ಈ ಕುರಿತು ಇಂದು ಶಿವಮೊಗ್ಗ ದಲ್ಲಿ ಮಾತನಾಡಿರುವ ಸಚಿವ ಕೆ.ಎಸ್​. ಈಶ್ವರಪ್ಪ, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದಕ್ಕೆ ನಾನು ಒಪ್ಪಲ್ಲ‌. ಅವರು ಒಂದು ಪ್ರಕಾರದ ಹಿಂದೂತ್ವವಾದಿ, ಅದಕ್ಕೆ‌ ನಾನು ಖುಷಿ ಪಡುತ್ತೇನೆ. ಆದರೆ, ಅವರು  ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು” ಎಂದು ಸಲಹೆ ನೀಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್​ ಮತ್ತು ಬಿ.ಎಸ್.​ ಯಡಿಯೂರಪ್ಪ ಬಿಕ್ಕಟ್ಟಿನ ಕುರಿತು ಮಾತನಾಡಿರುವ ಸಚಿವ ಈಶ್ವರಪ್ಪ, “ಯತ್ನಾಳ್ ಬಗ್ಗೆ ಏನು ಕ್ರಮ ತೆಗೆದು ಕೊಳ್ಳಬೇಕು? ಎಂಬ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕಳುಹಿಸಿ ಕೊಡಲಾಗಿದೆ. ಕೇಂದ್ರದ ನಾಯಕರು ಅವರಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಯತ್ನಾಳ್ ಉತ್ತರ ಸಹ ನೀಡಿದ್ದಾರೆ. ಕೇಂದ್ರದ ನಾಯಕರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಪಂಚಮಸಾಲಿ ಸೇರಿದಂತೆ ಅನೇಕ ಸಮುದಾಯಗಳ ಮೀಸಲಾತಿ ಹೋರಾಟದ ಕುರಿತು ಮಾತನಾಡಿರುವ ಈಶ್ವರಪ್ಪ, “ರಾಜ್ಯದಲ್ಲಿ  ಹಲವು ಸಮಾಜದವರು ಅವರ ಸಮಾಜಕ್ಕೆ ಮೀಸಲಾತಿ ಬೇಕು ಎಂದು ಕೇಳುತ್ತಿದ್ದಾರೆ. ಆದರೆ ಅರ್ಹತೆ ತಕ್ಕಂತೆ ಮೀಸಲಾತಿ ಸಿಗಬೇಕು ಎಂಬುದು ನನ್ನ ಆಶಯವಾಗಿದೆ. ಆದರೆ, ಒತ್ತಾಯ ಮಾಡಿದವರಿಗೆ ಮೀಸಲಾತಿ ನೀಡುವುದಕ್ಕೆ ನಾನು ವಿರೋಧಿಸುತ್ತೇನೆ. ರಾಜ್ಯದಲ್ಲಿ ಅನೇಕ ಸಮಾಜದವರು ತಮಗೆ ಮೀಸಲಾತಿ ಬೇಕು ಎಂದು ಕೇಳುತ್ತಿದ್ದಾರೆ.

Spread the love

About Laxminews 24x7

Check Also

ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Spread the love ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ