Breaking News

GST ವ್ಯಾಪ್ತಿಗೆ ಪೆಟ್ರೋಲ್‌, ಡಿಸೇಲ್‌ : ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

Spread the love

ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕರೋನಾ ವೈರಸ್ ಪೂರೈಕೆ ಕಡಿತಕ್ಕೆ ಕಾರಣವಾಗಿ ತೈಲ ಉತ್ಪಾದನೆಮೇಲೂ ಪರಿಣಾಮ ಬೀರಿತು. ಪೆಟ್ರೋಲಿಯಂ ಉತ್ಪನ್ನಗಳನ್ನು ಅದರ ಪರಿಮಿತಿಯೊಳಗೆ ಸೇರಿಸಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಎಸ್ ಟಿ ಕೌನ್ಸಿಲ್ ಗೆ ನಾವು ನಿರಂತರವಾಗಿ ಮನವಿ ಮಾಡುತ್ತಿದ್ದೇವೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಂಬಂಧಪಟ್ಟಂತೆ ಮಾತನಾಡಿರುವ ಅವರು, ರಾಜಸ್ಥಾನ ಮತ್ತು ಮಹಾರಾಷ್ಟ್ರ ಗಳು ಅತಿ ಹೆಚ್ಚು ತೆರಿಗೆ ಯನ್ನು ಹೊಂದಿವೆ ಎಂಬುದನ್ನು ಸೋನಿಯಾ ಜಿ ತಿಳಿದುಕೊಳ್ಳಬೇಕು ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಆದಾಯ ವು ಲಾಕ್‌ ಡೌನ್ ಸಮ ಸಮಯದಲ್ಲಿ ಬಹಳ ಕಡಿಮೆ ಇತ್ತು ಅಂತ ಅವರು ಇದೇ ವೇಳೆ ಹೇಳಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಮುಖಿಯಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂ ದಾಟಿದೆ. ಇಂಧನ ಬೆಲೆ ಏರಿಕೆ ಬಗ್ಗೆ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಲೇ ಇದೆ. ಭಾನುವಾರ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳಿವೆ ಅಂತ ಹೇಳಿದ್ದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ