ಮೂಡಲಗಿ: ಕೊರೊನಾ ಕಾರಣದಿಂದ ಕಳೆದ ಒಂದು ವರ್ಷದಿಂದ ಜಾತ್ರೆ, ಹಬ್ಬ ಹರಿದಿನಗಳು ನಿಂತುಹೋಗಿದ್ದವು. ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲಿ ಎಂದು ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸೋಣ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದ್ದಾರೆ.
ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ ಎತ್ತುಗಳ ತೆರೆಬಂಡಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಕಡಾಡಿ, ಘಟಪ್ರಭಾ ನದಿಯ ತೀರದಲ್ಲಿ ಜನಿಸಿ ಭಕ್ತರ ಭಾಗ್ಯದಾತೆಯಾಗಿ ತನ್ನ ಕೀರ್ತಿಯನ್ನು ಜಗಕ್ಕೆ ತೋರಿದ, ನಂಬಿದವರ ಕೈ ಬಿಡದ ಇಷ್ಠಾರ್ಥ ಇಡೇರಿಸುವ ಶ್ರೀ ಮಹಾದೇವಿಯನ್ನು ಪ್ರತಿಯೊಬ್ಬರು ಪ್ರಾರ್ಥಿಸಿ ಆರಾಧಿಸೊಣ ಎಂದರು.
Laxmi News 24×7