Breaking News

ನೂರು ವರ್ಷದ ಬಳಿಕ ನಡೆಯುತ್ತಿರುವ ಹಿಂಡಲಗಾ ​ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆ

Spread the love

ಬೆಳಗಾವಿ​ – ನೂರು ವರ್ಷದ ಬಳಿಕ ನಡೆಯುತ್ತಿರುವ ಹಿಂಡಲಗಾ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆಯ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ​ಹೆಬ್ಬಾಳಕರ್ ನೇತೃತ್ವದಲ್ಲಿ ಗ್ರಾಮಸ್ಥರು  ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.​
 
​ಮಾರ್ಚ್ 16ರಿಂದ 20ರ ವರೆಗೆ ಜಾತ್ರೆ ನಡೆಯಲಿದ್ದು, ಜಾತ್ರೆಯ ಹಿನ್ನೆಲೆಯಲ್ಲಿ ಇಡೀ ಗ್ರಾಮದಲ್ಲಿ ಹ​ರ್ಷದ​ ವಾತಾವರಣ ನಿರ್ಮಾಣವಾಗಿದೆ.​ ಜಾತ್ರಾ ಮಹೋತ್ಸವಕ್ಕೆ ಯಾವುದೇ ಅಡ್ಡಿ ಆತಂಕಗಳು, ಅಹಿತಕರ ಘಟನೆಗಳು ನಡೆಯ​ದ ಹಾಗೆ ಮುಂಜಾಗ್ರತಾ ಕ್ರಮಗಳನ್ನು ​ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಸದಸ್ಯ​ರು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಜೊತೆ​ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಮನವಿಯನ್ನು ಸಲ್ಲಿಸಿ ಜಿಲ್ಲಾಧಿಕಾರಿಗಳ​ ಜೊತೆ ಸುಧೀರ್ಘವಾಗಿ ಚರ್ಚಿಸಿದ​ರು.​
ಕಳೆದ ವರ್ಷ ಜರುಗಬೇಕಾ​ಗಿದ್ದ ಈ ಜಾತ್ರಾ ಮಹೋತ್ಸವವು ಕೊರೊನಾ ಆವರಿಸಿದ್ದ ಕಾರಣ ರದ್ದುಗೊಂಡಿತ್ತು, ಈ ವರ್ಷ ಜಾತ್ರಾ ಮಹೋತ್ಸವ​ದಲ್ಲಿ​ ಪಾಲ್ಗೊಳ್ಳುವ ಭಕ್ತಾಧಿಗಳಿಗೆ ಯಾವುದೇ ತೊಂದರೆಗಳಾಗಬಾರದು ​ಎ​ನ್ನುವ ಉದ್ದೇಶದಿಂದ ಮೂಲಭೂತ ಸೌಕರ್ಯ,​ ಪೊಲೀಸ್​ ಭದ್ರತೆ, ವಿದ್ಯುತ್ ಸೌಲಭ್ಯ, ರಸ್ತೆ ಸಂಪರ್ಕ, ನೀರಿನ ವ್ಯವಸ್ಥೆ, ಆರೋಗ್ಯ, ಅಂಬ್ಯುಲೈನ್ಸ್ ವ್ಯವಸ್ಥೆ​ ಸೇರಿದಂತೆ​ ಒಟ್ಟಾರೆಯಾಗಿ ಜಾತ್ರೆ ಒಂದು ಶಿಸ್ತು, ಸಂಯಮದಿಂದ ಕೂಡಿರಬೇಕೆ​ನ್ನುವ ಹಿನ್ನೆಲೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ​
​ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ​

Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ