Breaking News

ಜಮೀನಿನಲ್ಲಿ ಕೆಲಸ ಮಾಡ್ತಿದ್ದಾಗ ಸಿಡಿಲು ಬಡಿದು ರೈತ ಸಾವು

Spread the love

ಗದಗ: ಜಮೀನಿನಲ್ಲಿ ಬಿತ್ತನೆ ಕಾರ್ಯ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದಲ್ಲಿ ನಡೆದಿದೆ.

34 ವರ್ಷದ ಕೃಷ್ಣಪ್ಪ ಭಜಮ್ಮನವರ್ ಮೃತ ದುರ್ದೈವಿ ರೈತ. ನಾಲ್ಕು ಜನ ಸೇರಿಕೊಂಡು ಜಮೀನಿನಲ್ಲಿ ಮೆಣಸಿನ ಬೀಜ ಬಿತ್ತನೆ ಮಾಡ್ತಿದ್ದರು. ಮಳೆ ಬಂದ ಹಿನ್ನೆಲೆಯಲ್ಲಿ ಇತರೆ 3 ಬೇರೆ ಮರದಡಿ ನಿಂತುಕೊಂಡಿದ್ದಾರೆ. ಆದರೆ ಕೃಷ್ಣಪ್ಪ ಒಬ್ಬನೇ ಒಂದು ಮರದಡಿ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದರು. ಈ ವೇಳೆ ಸಿಡಿಲು ಬಡಿದಿದೆ.

ಮಳೆ ಬರುವ ಮುನ್ನ ಜೊತೆಗಿದ್ದ ಕೃಷ್ಣಪ್ಪ ಮಳೆ ನಿಂತ ಮೇಲೆ ಜೀವವೇ ನಿಂತು ಹೋಗಿದ್ದು, ಜೊತೆಗಿದ್ದವರಿಗೂ ಒಂದು ರೀತಿ ಶಾಕ್ ಹೊಡೆದಂತಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮ ಲೆಕ್ಕಾಧಿಕಾರಿ, ರೋಣ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಜಿಲ್ಲೆಯ ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ