Breaking News
Home / ಜಿಲ್ಲೆ / ಬೆಂಗಳೂರು / ಅಭಿಮಾನಿಗಳ ವರ್ತನೆಗೆ ಕ್ಷಮೆ ಕೋರಿದ ‘ಡಿ ಬಾಸ್​’

ಅಭಿಮಾನಿಗಳ ವರ್ತನೆಗೆ ಕ್ಷಮೆ ಕೋರಿದ ‘ಡಿ ಬಾಸ್​’

Spread the love

ಬೆಂಗಳೂರು: ಅಭಿಮಾನಿಗಳ ವರ್ತನೆಗೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕ್ಷಮೆ ಕೇಳಿದ್ದು, ನವರಸ ನಾಯಕ ಜಗ್ಗೇಶ್​ ಮತ್ತು ಡಿ ಬಾಸ್​ ಅಭಿಮಾನಿಗಳ ವಿವಾದ ಸುಖಾಂತ್ಯ ಕಂಡಿದೆ.

ಜಗ್ಗೇಶ್ ಅವ್ರು ಹಿರಿಯರು. ಅವರೇ ಮುಂದಿರಲಿ. ಅವರ ಮೇಲೆ ಅಭಿಮಾನಿಗಳು ಮುತ್ತಿಗೆ ಹಾಕಿರೋದು ನನಗೆ ಗೊತ್ತಿರಲಿಲ್ಲ. ಅದು ಹೇಗೆ ಶುರುವಾಯ್ತು ಎಂಬುದೂ ನನಗೆ ಗೊತ್ತಿಲ್ಲ ಎಂದ ದರ್ಶನ್, ನನ್ನ ಫ್ಯಾನ್ಸ್ ನಿಂದ ನಿಮಗೆ ನೋವಾಗಿದೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ದರ್ಶನ್ ಮಾಧ್ಯಮಗಳ ಮುಂದೆ ಬುಧವಾರ ಕೋರಿದರು.

ಇನ್ನು ದರ್ಶನ್ ಕ್ಷಮೆ ಕೇಳಿದ್ದಕ್ಕೆ ಮನಸ್ಸು ಹಗುರ ಆಯಿತು ಎಂದು ಟ್ವೀಟ್ ಮಾಡಿದ ನವರಸನಾಯಕ ಜಗ್ಗೇಶ್, ‘ಸಮಯ ಸಂದರ್ಭ ವಿಷಘಳಿಗೆ. ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯ. ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ. ಕನ್ನಡಕ್ಕೆ ಒಗ್ಗಟ್ಟಿರಲಿ. ದರ್ಶನ್​ಗೆ ಧನ್ಯವಾದ. ಮನಸ್ಸು ಹಗುರವಾಯಿತು. ಧನ್ಯವಾದ ಮಾಧ್ಯಮಮಿತ್ರರಿಗೆ. ಧನ್ಯವಾದ ಕನ್ನಡದ ಮನಗಳಿಗೆ. ಇನ್ನೆಂದೂ ಇಂಥ ದಿನ ಬಾರದಿರಲಿ’ ಎಂದು ಟ್ವೀಟ್​ ಮಾಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ