ಬೆಂಗಳೂರು : ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು, ಅವರ ಜೊತೆಗೆ ಸಭೆ ನಡೆಸಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ.
ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪಕ್ಷ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್ ಗೆ ರವಾನಿಸಲಿದ್ದು, ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರು ಬಸವಕಲ್ಯಾಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು.