ಮೈಸೂರು : ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಅಂತ್ಯವಾದ ನಂತರ ಕಾಂಗ್ರೆಸ್ ನಲ್ಲಿ ಭಿನ್ನಮತ ಶುರುವಾಗಿದೆ.
ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿಗೆ ಅಪಸ್ವರ ಕೇಳಿ ಬಂದಿದೆ. ಶಾಸಕ ತನ್ವೀರ್ ಸೇಠ್ ಗೆ ಕೆಪಿಸಿಸಿ ವತಿಯಿಂದ ನೊಟೀಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ
ಅವರ ವಿರುದ್ಧ ಈ ಸಂದರ್ಭದಲ್ಲಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಕೋಮುವಾದಿ ಬಿಜೆಪಿಯನ್ನು ದೂರ ಮಾಡಲು ಶಾಸಕ ತನ್ವೀರ್ ತಂತ್ರ ಉಪಯೋಗಿಸಿ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಒಪ್ಪಿಕೊಂಡರು. ಅಂಥವರಿಗೆ ಕೆಪಿಸಿಸಿಯಿಂದ ನೋಟಿಸ್ ಕೊಡಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಕೆಳಮಟ್ಟದ ನಾಯಕರನ್ನು ಸಿದ್ದರಾಮಯ್ಯ ಬೆಳೆಯಲು ಬಿಡುತ್ತಿಲ್ಲ. ನೊಟೀಸ್ ಕೊಟ್ಟರೆ ನಾವು ಉಗ್ರರೂಪದ ಹೋರಾಟ ನಡೆಸುತ್ತೇವೆ ಎಂದು ಪ್ರತಿಭಟಿಸಿದರು.