Breaking News
Home / ರಾಜ್ಯ / ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು!?

ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು!?

Spread the love

ಮೈಸೂರು : ಮೈಸೂರು ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ಅಂತ್ಯವಾದ ನಂತರ ಕಾಂಗ್ರೆಸ್ ನಲ್ಲಿ ಭಿನ್ನಮತ ಶುರುವಾಗಿದೆ.

ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿಗೆ ಅಪಸ್ವರ ಕೇಳಿ ಬಂದಿದೆ. ಶಾಸಕ ತನ್ವೀರ್ ಸೇಠ್‌ ಗೆ ಕೆಪಿಸಿಸಿ ವತಿಯಿಂದ ನೊಟೀಸ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ

ಅವರ ವಿರುದ್ಧ ಈ ಸಂದರ್ಭದಲ್ಲಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕೋಮುವಾದಿ ಬಿಜೆಪಿಯನ್ನು ದೂರ ಮಾಡಲು ಶಾಸಕ ತನ್ವೀರ್ ತಂತ್ರ ಉಪಯೋಗಿಸಿ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಒಪ್ಪಿಕೊಂಡರು. ಅಂಥವರಿಗೆ ಕೆಪಿಸಿಸಿಯಿಂದ ನೋಟಿಸ್ ಕೊಡಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.

ಕೆಳಮಟ್ಟದ ನಾಯಕರನ್ನು ಸಿದ್ದರಾಮಯ್ಯ ಬೆಳೆಯಲು ಬಿಡುತ್ತಿಲ್ಲ. ನೊಟೀಸ್ ಕೊಟ್ಟರೆ ನಾವು ಉಗ್ರರೂಪದ ಹೋರಾಟ ನಡೆಸುತ್ತೇವೆ ಎಂದು ಪ್ರತಿಭಟಿಸಿದರು.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ