ಬೆಳಗಾವಿ: ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು ಮೂವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಗೋಕಾಕ್ ನ ಅರಬಾವಿ ಗ್ರಾಮದ ಸಂತೋಷ್ ಗಂಗಾರಾಮ ವಡ್ಡರ, ವಿಶಾಲ ನರಸಿಂಗ ಹಾಗೂ ಚಿನ್ನದ ವ್ಯಾಪಾರಿ ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 18,59,776/-ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯ ಕಿತ್ತೂರು ಠಾಣೆ ವ್ಯಾಪ್ತಿಯ 13 ಮನೆ, ಮಾರಿಹಾಳ ಠಾಣಾ ವ್ಯಾಪ್ತಿಯ 2 ಮನೆ ಮತ್ತು 1 ದೇವಸ್ಥಾನ, ಮಾಳಮಾರುತಿ ಠಾಣಾ ವ್ಯಾಪ್ತಿಯ 5 ಮನೆ, ಗೋಕಾಕ್ ಶಹರದಲ್ಲಿ 1 ಮನೆ ಯಮಕನ ಮರಡಿಯಲ್ಲಿ 1 ಮನೆ ಸೇರಿದಂತೆ ಹಲವೆಡೆಗಳಲ್ಲಿ ಕಳ್ಳತನ ಮಾಡಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತು ಹೆಚ್ಚುವರಿ ಎಸ್ ಪಿ ಅಮರನಾಥ ರೆಡ್ಡಿ, ಡಿಎಸ್ ಪಿ ಜಾವಿದ್ ಇನಾಂದಾರ್ ಹುಕ್ಕೇರಿ ಸಿಪಿಐ ಅಮೇಶ್ ಛಾಯಗೋಳ ಮಾರ್ಗದರ್ಶನದಲ್ಲಿ ಯಮಕನಮರಡಿ ಪಿಎಸ್ ಐ ರಮೇಶ ಪಾಟೀಲ ಇವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಟಿ.ವಿ.ನೆರ್ಲಿ, ವಿಠಲ ನಾಯಕ, ಎಲ್.ವೈ.ಕಿಲಾರ, ಮಹೇಶ ಮಸರಗುಪ್ಪಿ, ಆರ್.ಆರ್.ಗಿಡ್ಡಪ್ಪಗೋಳ, ಎಸ್.ಎ.ಶೇಟ್, ಮೈಲಾರಿ ಬೆಣ್ಣೆ ಇವರುಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.