Breaking News

ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

Spread the love

ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ.

ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಎಲ್ಲರೂ ಅಕ್ಕಪಕ್ಕದ ಗ್ರಾಮದವರಾಗಿದ್ದಾರೆ ಎಂದು ವರದಿಗಳು ತಿಳಿಸುತ್ತವೆ.


Spread the love

About Laxminews 24x7

Check Also

ಕಳುವಾಗಿದ್ದ 894 ಮೊಬೈಲ್​ ಸಿಇಐಆರ್ ಪೋರ್ಟಲ್ ಸಹಾಯದಿಂದ ಹಿಂಪಡೆದ ಪೊಲೀಸರು

Spread the loveಬೆಂಗಳೂರು :‌ ಸೂಕ್ತ ದಾಖಲೆಗಳಿಲ್ಲದೇ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್‌ಗಳನ್ನು ಖರೀದಿಸುವ ಮುನ್ನ ಎಚ್ಚರ. ಕದ್ದು ಮಾರಾಟ ಮಾಡಲಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ