Breaking News
Home / ಜಿಲ್ಲೆ / ಬೆಳಗಾವಿ / ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವೋಮನ್ ಎಂದ ರಮೇಶ್ ಜಾರಕಿಹೊಳಿ

ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವೋಮನ್ ಎಂದ ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಟಾಕ್‍ಫೈಟ್ ಮುಂದುವರಿದಿದೆ. ಲಕ್ಷ್ಮಿ ಹೆಬ್ಬಾಳ್ಕರ್‍ರನ್ಬು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗೆಲ್ಲಿಸಿದ್ದು ನಾನೇ ಎಂದು ಪದೇಪದೇ ಹೇಳುತ್ತಿದ್ದ ರಮೇಶ್ ಜಾರಕಿಹೊಳಿಗೆ ತಿರುಗೇಟು ನೀಡಿದ್ದ, ಲಕ್ಷ್ಮಿ ಹೆಬ್ಬಾಳ್ಕರ್ ರಮೇಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿಸಿದ್ದು ನಾನೇ ಅಂತಾ ಹೇಳಿದ್ದರು. ಈ ವಿಚಾರಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ ಲಕ್ಷ್ನೀ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಅಂತಾ ಲೇವಡಿ ಮಾಡಿದ್ರು.

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ದೇಶದ ವಿವಿಧ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಪ್ರತ್ಯೇಕ ಅಧಿಸೂಚನೆ ಪ್ರಕಟಿಸುವುದಾಗಿ ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೇ 2ರಂದು ರಾಜ್ಯದ 3 ವಿಧಾನಸಭಾ, ಲೋಕಸಭಾ ಉಪಚುನಾವಣೆ ಫಲಿತಾಂಶ ಬರುತ್ತೆ. ಯಾವ ಹಂತದಲ್ಲಿ ಚುನಾವಣೆ ಮಾಡ್ತಾರೆ ಅವರಿಗೆ ಬಿಟ್ಟ ವಿಷಯ ಎಂದರು. ಇನ್ನು ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಜಗದೀಶ್ ಶೆಟ್ಟರ್ ಸ್ಪರ್ಧಿಸಬೇಕೆಂಬ ಒತ್ತಡವಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಜಗದೀಶ್ ಶೆಟ್ಟರ್ ಸ್ಪರ್ಧೆ ಬಗ್ಗೆ ನನಗೆ ಮಾಹಿತಿ ಇಲ್ಲ. ವರಿಷ್ಠರು ಯಾರಿಗೆ ಟಿಕೆಟ್ ಕೊಡ್ತಾರೆ ಅವರ ಪರ ಕೆಲಸ ಮಾಡ್ತೇವೆ ಎಂದರು.


Spread the love

About Laxminews 24x7

Check Also

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the loveಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ