Breaking News

ಬಿಗ್ ನ್ಯೂಸ್: ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸಿಎಂ ಯಡಿಯೂರಪ್ಪರಿಗೆ ಸಿರಿಗೆರೆ ಶ್ರೀಗಳ ಪತ್ರ

Spread the love

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ ನಿಷೇಧಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿರಿಗೆರೆ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದು ಒತ್ತಾಯಿಸಿದ್ದಾರೆ.

ಮದ್ಯದ ದಾಸರಾಗಿ ರಾಜ್ಯದ ಗ್ರಾಮೀಣ ಪ್ರದೇಶದ ಬಡವರು, ದಲಿತರು, ಮಧ್ಯಮವರ್ಗದ ಕುಟುಂಬದವರು ನಿತ್ಯ ನರಕ ಅನುಭವಿಸುವಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸುವಂತೆ ಶ್ರೀಗಳು ಒತ್ತಾಯಿಸಿದ್ದಾರೆ.

ಮದ್ಯಪಾನದಂತಹ ಅನಿಷ್ಟದಿಂದ ನಾಡಿನ ಪರಂಪರೆಗೆ ಪೆಟ್ಟು ಬೀಳುತ್ತಿದೆ. ಮದ್ಯವ್ಯಸನಿಗಳು ದುಡಿಯುವ ಶಕ್ತಿ ಕಳೆದುಕೊಂಡು ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ನೆಮ್ಮದಿ ಹಾಳಾಗುತ್ತಿದ್ದು, ರಾಜ್ಯವನ್ನು ಮದ್ಯಮುಕ್ತವಾಗಿ ಮಾಡಲು ಮದ್ಯ ನಿಷೇಧ ಮಾಡಬೇಕೆಂದು ಹೇಳಲಾಗಿದೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ